ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ
ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ
ಹಿಂದಿನ ದಿನ, ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಕ್ಯಾಬಿನೆಟ್ ಸಭೆಯಲ್ಲಿ ನಖ್ವಿ ಮತ್ತು ಸಿಂಗ್ ಇಬ್ಬರನ್ನೂ ಶ್ಲಾಘಿಸಿದರು, ಇದು ಅವರ ಅಂತಿಮ ಕ್ಯಾಬಿನೆಟ್ ಸಭೆಯಾಗಿದೆ. ಇದನ್ನು ಓದಿ – ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ರಾಜ್ಯಸಭಾ ಸಂಸದರಾಗಿ ತಮ್ಮ ಅವಧಿ ಗುರುವಾರ ಕೊನೆಗೊಳ್ಳಲಿದ್ದು, ಶುಕ್ರವಾರದಿಂದ ಸಂಸದರ ಹುದ್ದೆ ಮುಕ್ತಾಯವಾಗುವ ಕಾರಣ ಸಾಂವಿಧಾನಿಕ ಹೊಣೆಗಾರಿಕೆ ಅರಿತು ಇಬ್ಬರೂ ಸಚಿವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ನಖ್ವಿ ರಾಜ್ಯಸಭೆಯ ಉಪನಾಯಕರೂ ಆಗಿದ್ದಾರೆ. ಸಿಂಗ್ ಅವರು ಜೆಡಿಯು ಕೋಟಾದಿಂದ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು