ನನ್ನ ಬಳಿ 19 ಸಿಡಿಗಳಿವೆ ಎಂದು ಹೇಳಿಕೆ ನೀಡಿದ್ದ ಬಳ್ಳಾರಿ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಗೆ ಕಬ್ಬನ್ ಪಾಕ್೯ ಠಾಣೆ ನೋಟಿಸ್ ಜಾರಿ ಮಾಡಿದ್ದಾರೆ.
ಕಬ್ಬನ್ಪಾರ್ಕ್ ಠಾಣೆ ಪೊಲೀಸರು ರಾಜಶೇಖರ್ ಮುಲಾಲಿಗೆ ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ಮುಲಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ಮಂಡ್ಯದ ಮಾನವ ಹಕ್ಕು ಸೇವಾ ಸಮಿತಿ ಅಧ್ಯಕ್ಷೆ ಇಂದಿರಾ ದೂರು ನೀಡಿದ್ದರು.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಲಾಲಿ, 6 ಸಚಿವರು ನ್ಯಾಯಾಲಯದ ಮೊರೆ ಹೋದ ವಿಚಾರವಾಗಿ ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿಕೊಂಡ ರಂತೆ. ತಪ್ಪು ಮಾಡದೆ ಇದ್ದರೆ ಇವರು ಏಕೆ ಹೆದರಬೇಕು ಎಂದು ಮುಲಾಲಿ ಪ್ರಶ್ನೆ ಮಾಡಿದರು.
ಸಿಡಿ ಇದೆ ಎಂದು ಹೇಳೋರನ್ನು ಏರೋಪ್ಲೇನ್ ಹತ್ತಿಸಿ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಮುಲಾಲಿ ತಿರುಗೇಟು ಕೊಟ್ಟು ಏರೋಪ್ಲೇನ್ ಏಕೆ ಬೇರೆ ಏನಾದರು ಇದ್ದರೆ ಹತ್ತಿಸಲಿ. ನಾವೇನು ಚಿತ್ರನಟಿಯನ್ನು ಮದುವೆಯಾಗಿಲ್ಲ. ಅವರು ರಾಜ್ಯದ ದುರಂತ ಮುಖ್ಯಮಂತ್ರಿ ಎಂದು ಜರಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ