ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಸೋಮವಾರ ಲಖನೌನಲ್ಲಿ ಈತನೇ ಪೊಲೀಸರಿಗೆ ಶರಣಾಗಲು ಮುಂದಾಗಿದ್ದ. ನಾನು ಯಾವುದೇ ಸಮಯದಲ್ಲೂ ಶರಣಾಗಲು ಸಿದ್ಧನಿದ್ದೇನೆ ಎಂದು ಹೇಳಿಕೊಂಡಿದ್ದ. ಇದೀಗ ಗೋಸಾವಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 3 ರಂದು ಎನ್ ಸಿ ಬಿ ಅಧಿಕಾರಿಗಳು ಶಾರೂಖ್ ಪುತ್ರ ಆರ್ಯನ್ ಖಾನ್ ಕ್ರೂಸ್ ಹಡಗಿನಲ್ಲಿ ಕಿರಣ್ ಗೋಸಾವಿ, ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸುದ್ದಿಯಾಗಿದ್ದರು.
ಗೋಸಾವಿ ವಿರುದ್ಧ 2018ರಲ್ಲಿ ವಂಚನೆ ಕೇಸ್ ದಾಖಲಾಗಿದೆ. ಐಪಿಸಿ 419, 420 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಐಟಿ ಆ್ಯಕ್ಟ್ ಅಡಿಯಲ್ಲೂ ದೂರು ದಾಖಲಾಗಿದೆ. ಈ ಸಂಬಂಧ ಪುಣೆ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದರು. ಹೀಗಾಗಿ ಗೋಸಾವಿ ಇಷ್ಟುದಿನ ತಲೆಮರೆಸಿಕೊಂಡಿದ್ದ. ನನ್ನ ಜೀವಕ್ಕೆ ಅಪಾಯ ಇರೋದ್ರಿಂದ ತಲೆಮರೆಸಿಕೊಂಡಿದ್ದೇನೆ ಎಂದು ಗೋಸಾವಿ ಹೇಳಿಕೊಂಡಿದ್ದ.