ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಆಸೆಗಣ್ಣಿನಿಂದ ನೋಡುತ್ತಿದ್ದ ಜನಪ್ರತಿನಿಧಿಗಳಿಗೆ ಮತ್ತೊಂದು ಬಾರಿ ನಿರಾಸೆ ಉಂಟಾಗಿದೆ. ರಾಜ್ಯ ಸರಕಾರ ಹೊರಡಿಸಿದ್ದ ಮೀಸಲಾತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮತ್ತೆ ತಡೆಯಾಜ್ಞೆ ನೀಡಿದೆ.
ಹಾಸನ, ಅರಸೀಕೆರೆ ನಗರಸಭೆಗೆ ಪ್ರಕಟಿಸಿದ್ದ ಮೀಸಲಾತಿಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಜೊತೆಗೆ ಸರಕಾರ ಪ್ರಕಟಿಸಿದ ಮೀಸಲು ಪರಿಶೀಲನೆಗೆ 3 ಸದಸ್ಯರ ಸಮಿತಿ ರಚಿಸಲಾಗಿದೆ.
ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ನ್ಯಾಯವಾದಿ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್ ನೇಮಿಸಿರುವ ಸಮಿತಿಯಲ್ಲಿದ್ದಾರೆ. ಅಕ್ಟೋಬರ್ 22ರಂದು ವರದಿ ನೀಡಲು ಸಮಿತಿಗೆ ಹೈಕೋರ್ಟ್ ಸೂಚಿಸಿದೆ.
ಹಾಸನ, ಅರಸೀಕೆರೆ ನಗರಸಭೆಗಳಲ್ಲಿ ಬಹುಮತವಿದ್ದರೂ ಜೆಡಿಎಸ್ಗೆ ಸರಕಾರ ಪ್ರಕಟಿಸಿದ್ದ ಮೀಸಲಾತಿಯಿಂದ ಅಧ್ಯಕ್ಷ ಸ್ಥಾನ ಕೈತಪ್ಪಿತ್ತು. ಈ ಕಾರಣದಿಂದ ಸರಕಾರದ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಕಳೆದ ಗುರುವಾರವಷ್ಟೇ ಸರಕಾರ ಮೀಸಲಾತಿ ಪ್ರಕಟಿಸಿ ಆದೇಶ ಹೊರಡಿಸಿತ್ತು.
ರಾಜ್ಯದ 276 ಪೌರಾಡಳಿತ ಸಂಸ್ಥೆಗಳಲ್ಲಿ ಕಳೆದ ಎರಡುವರೆ ವರ್ಷಗಳಿಂದ ಚುನಾಯಿತ ಅಧ್ಯಕ್ಷ-ಉಪಾಧ್ಯಕ್ಷರಿಲ್ಲದೆ ಜನರಿಗೆ ಭಾರಿ ತೊಂದರೆಯಾಗಿತ್ತು. ಜನಪ್ರತಿನಿಧಿಗಳು ಅಧಿಕಾರವೇ ಇಲ್ಲದೆ ಎರಡು ವರ್ಷ ಕಳೆದಿದ್ದರು. ಅಕ್ಟೋಬರ್ 8ರಂದು ರಾಜ್ಯದ 59 ನಗರಸಭೆ, 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಮೀಸಲು ಪಟ್ಟಿಯನ್ನು ಸರಕಾರ ಪ್ರಕಟಿಸಿತ್ತು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment