ಕಾಲಿವುಡ್ ಖ್ಯಾತ ನಟ ಸಿಂಬು ಒಡೆತನದ ಐಶಾರಾಮಿ ಕಾರು ಮಾ.18 ರಂದು ವ್ಯಕ್ತಿಯೋರ್ವನನ್ನು ಬಲಿ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಪಘಾತಕ್ಕೀಡಾದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಮುನುಸ್ವಾಮಿ ಎಂದು ಗುರುತಿಸಲಾಗಿದೆ 70ರ ವಯಸ್ಸಿನ ಇವರು ತೇನಂಪೇಟೆ ಪ್ರದೇಶದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಕೆಲವೇ ದಿನಗಳ ಹಿಂದೆ ಅವರಿಗೆ ಕಾಲಿಗೆ ಪೆಟ್ಟಾಗಿದ್ದರಿಂದ, ತೆವಳುತ್ತಾ ರಸ್ತೆ ದಾಟುತ್ತಿದ್ದರು ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಸಿಂಬು ಹೆಸರಿನಲ್ಲಿರುವ ಕಾರು ಮುನುಸ್ವಾಮಿ ಮೇಲೆ ಹರಿದಿದೆ.
ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳಿಯರು ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ ತಕ್ಷಣವೇ ಕಾರಿನಲ್ಲಿದ್ದವರು ಪರಾರಿ ಆಗಿದ್ದಾರೆ. ಹಾಗಾಗಿ ಯಾರೆಲ್ಲ ಕಾರಿನಲ್ಲಿ ಇದ್ದರು ಎಂದು ಇನ್ನೂ ಪತ್ತೆ ಆಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಚಾಲಕ ಸೆಲ್ವಂ ಎಂಬುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದು, ಹಚ್ಚಿನ ವಿಚಾರಣೆ ನಡೆಸಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
- ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
More Stories
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಬೆಂಗಳೂರು ಡಿಸಿ ಕಚೇರಿ ಮೇಲೆ ACB ದಾಳಿ; DC ಆಪ್ತ ಸಹಾಯಕ 5 ಲಕ್ಷ ರು ಲಂಚ ಸ್ವೀಕಾರ ವೇಳೆ ಬಲೆಗೆ
ಬೆಂಗಳೂರಿನಲ್ಲಿ ಕಾಂಪ್ಲೆಕ್ಸ್ ಮೇಲಿನಿಂದ ಜಿಗಿದು ಪ್ರೇಮಿಗಳು – ಆತ್ಮಹತ್ಯೆಗೆ ಯತ್ನ-ಯುವತಿ ಸಾವು