February 20, 2026

Newsnap Kannada

The World at your finger tips!

muraga durga

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರಘಾ ಸ್ವಾಮಿಗೆ ಚಿಕಿತ್ಸೆ: ನ್ಯಾಯಾಲಯ ಅನುಮತಿ

Spread the love

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ.

ಮುರುಘಾ ಸ್ವಾಮಿ ಹೃದಯ ಸಂಬಂಧಿ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಅನುಮತಿಸಿದೆ.

ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ ಮರಕಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ನ್ಯಾಯಾಧೀಶೆ ಬಿ.ಕೆ. ಕೋಮಲ ಅವರು ಅನುಮತಿ ನೀಡಿದ್ದು, ಸ್ವಾಮಿಯನ್ನು ಇಂದು ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.

error: Content is protected !!