crime

ಶ್ರೀರಂಗಪಟ್ಟಣದಲ್ಲಿ ಇಯರ್ ಫೋನ್,ಬೆಳ್ಳಿ ಖಡ್ಗದ ಆಸೆಗೆ ಅಮಾಯಕನ ಕೊಲೆ – ಸೈಕೋ ರಫಿ ಬಂಧನ

ಒಂದು ಇಯರ್ ಫೋನ್, 25 ಗ್ರಾಂ ಬೆಳ್ಳಿ ಖಡ್ಗದ ಆಸೆಗೆ ಶ್ರೀರಂಗಪಟ್ಟಣದಲ್ಲಿ ಎರಡು ತಿಂಗಳ ಹಿಂದೆ ನಡೆದಿದ್ದ ಗೂಡ್ಸ್ ಆಟೋ ಚಾಲಕನ ಕೊಲೆ ಪ್ರಕರಣವನ್ನು ಮಂಡ್ಯ ಪೊಲೀಸರು ಭೇದಿಸಿದ್ದಾರೆ.

ಸಣ್ಣ ಸುಳಿವು ಸಿಗದಂತೆ ಡಿಸೆಂಬರ್ 6 ರ ಮಧ್ಯರಾತ್ರಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಬಳಿ ಗೂಡ್ಸ್ ಆಟೋ ಚಾಲಕನನ್ನು ಹಂತಕ ಹತ್ಯೆ ಮಾಡಿದ್ದನು.

ಗೂಡ್ಸ್ ಆಟೋ ಚಾಲಕ ಗಜೇಂದ್ರ(25) ಕೊಲೆಯಾದ ದುರ್ದೈವಿ.
ಈತ ಹೊಸಪೇಟೆ ತಾಲೂಕಿನ ಕುಂಬಾರಹಳ್ಳಿಯ ಗ್ರಾಮದವನು.

ಹೊಸಪೇಟೆಯಿಂದ ಮೈಸೂರಿಗೆ ತರಕಾರಿಯನ್ನು ಗಜೇಂದ್ರ ಸಾಗಿಸುತ್ತಿದ್ದನು. ಅಂದು ಮೈಸೂರಿಗೆ ತೆರಳುವಾಗ ನಿದ್ದೆ ಬಂದ ಕಾರಣ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿ ಗೂಡ್ಸ್ ವಾಹನ ನಿಲ್ಲಿಸಿ ನಿದ್ದೆ ಮಾಡುತ್ತಿರುತ್ತಾನೆ.

ಈ ವೇಳೆ ಸೈಯದ್ ರಫೀಕ್ ಆಟೋ ಗಾಜು ಹೊಡೆದು ಗಂಜೇಂದ್ರನನ್ನು ಮಚ್ಚಿನಿಂದ ಕೊಚ್ಟಿ ಕೊಲೆ ಮಾಡಿದ್ದಾನೆ.

ನಂತರ ಗಜೇಂದ್ರನ ಮೈ ಮೇಲೆ ಇದ್ದ 25 ಗ್ರಾಂ ಬೆಳ್ಳಿ ಖಡ್ಗ ಹಾಗೂ 200 ರೂ. ಮೌಲ್ಯದ ಹೆಡ್ ಫೋನ್ ದೋಚಿ ಪರಾರಿಯಾಗಿದ್ದಾನೆ.

ಶೋಧನೆ ಮಾಡಿದ ಬಳಿಕ ಆತ ಸೈಯ್ಯದ್ ರಫಿ ಎಂದು ಪೊಲೀಸರಿಗೆ ತಿಳಿಯುತ್ತೆ. ಆಗ ಪೊಲೀಸರು ಸೈಯ್ಯದ್ ರಫಿ ಎಲ್ಲಿದ್ದಾನೆ ಎಂದು ಹುಡುಕುವಷ್ಟರಲ್ಲಿ ಆತ ಸರಗಳ್ಳತನ ಮಾಡಿ ರಾಮನಗರ ಜೈಲು ಸೇರಿದ್ದಾನೆ ಎಂದು ತಿಳಿಯುತ್ತದೆ. ಮಂಡ್ಯ ಪೊಲೀಸರು ರಾಮನಗರಕ್ಕೆ ತೆರಳಿ ವಿಶೇಷ ಅನುಮತಿ ಪಡೆದು ರಫಿಯನ್ನು ವಿಚಾರಣೆಗೆ ಒಳಪಡಿಸಿದ ವೇಳೆ ಆತ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ.

ಕೊಲೆ ಮಾಡಿರುವ ಸೈಯ್ಯದ್ ರಫಿ ಸೈಕೋ ಆಗಿದ್ದಾನೆ, ಶ್ರೀರಂಗಪಟ್ಟಣದ ಬಳಿ ಕೊಲೆ ಮಾಡಿದ ಮರುದಿನವೇ ರಫಿ ರಾಮನಗರದಲ್ಲಿ ರಸ್ತೆಯಲ್ಲಿ ಮಚ್ಚು ಹಿಡಿದು ಓಡಾಡಿರುತ್ತಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಕೋ ಮನಸ್ಥಿತಿ ಹೊಂದಿದ್ದ ಸಯ್ಯದ್ ರಫಿ, ಸರಗಳ್ಳತ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024