ಮಂಡ್ಯದಲ್ಲಿ ಕಳೆದ 2 ತಿಂಗಳ ಹಿಂದೆ ನಾಲೆಯಲ್ಲಿ ತೇಲಿಬಂದ ರುಂಡವಿಲ್ಲದ ಇಬ್ಬರು ಮಹಿಳೆಯರ ಮೃತದೇಹ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮದುವೆಯಾಗಿದ್ದರೂ ಪರ ಸ್ತ್ರೀ ಮೋಹದ ಬಲೆಗೆ ಬಿದ್ದಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ ಮೂರು ಕೊಲೆ ಮಾಡಿದ್ದ. ಮಂಡ್ಯದಲ್ಲಿ 2 ತಿಂಗಳ ಹಿಂದೆ ನಾಲೆಯಲ್ಲಿ ಎರಡು ರುಂಡವಿಲ್ಲದ ಮೃತದೇಹ ತೇಲಿಬಂದಿತ್ತು.ಇದನ್ನು ಓದಿ –ಮೈಸೂರು ದಸರಾ 2022; ಆಗಸ್ಟ್ 7ಕ್ಕೆ ಗಜಪಯಣ ಆರಂಭ
ಈ ಪ್ರಕರಣದ ಬೆನ್ನುಬಿದ್ದ ಶ್ರೀರಂಗಪಟ್ಟಣ ಪೊಲೀಸರಿಗೆ ಲಿಂಕ್ ಸಿಕ್ಕಿದ್ದು ಚಾಮರಾಜನಗರದಲ್ಲಿನ ಒಂದು ಮಿಸ್ಸಿಂಗ್ ಕೇಸ್ ನಲ್ಲಿ ಆ ಮಿಸ್ಸಿಂಗ್ ಕೇಸ್ ಬೆನ್ನತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪತ್ನಿ ಸಂಬಂಧಿಯೊಂದಿಗೆ ಲವ್ವಿ-ಡವ್ವಿ:
ಬೆಂಗಳೂರು ಮೂಲದ ಸಿದ್ದಲಿಂಗಪ್ಪ(35) ಎಂಬಾತನೇ ಕೊಲೆ ಆರೋಪಿ. ಈತನಿಗೆ ಮದುವೆಯಾಗಿದ್ದರೂ ಪತ್ನಿ ಸಂಬಂಧಿಯ ಜೊತೆ ಲವ್ನಲ್ಲಿ ಬಿದ್ದಿದ್ದ. ಆದರೆ ಆಕೆಗೆ ವೇಶ್ಯಾವಟಿಕೆ ಲಿಂಕ್ ಇತ್ತು. ಇದನ್ನು ಸಿದ್ದಲಿಂಗಪ್ಪ ಸಹಿಲಾಗದೇ ಪ್ರೇಯಸಿಯ ಲಿಂಕ್ನಲ್ಲಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕೊಲೆಗೈಯ್ಯುತ್ತಿದ್ದ.
ಪ್ರೇಯಸಿಯ ಗುಂಗಲ್ಲಿ ಸಿದ್ದಲಿಂಗಪ್ಪ ಸೈಕೋ ಆಗಿದ್ದ. ಅದಕ್ಕಾಗಿ ಪ್ರೇಯಸಿಗೆ ಹಣ, ಚಿನ್ನಾಭರಣದ ಆಸೆ ಹುಟ್ಟಿಸಿ ಮೂವರು ಮಹಿಳೆಯರ ಕೊಲೆಗೈದಿದ್ದಾನೆ. ಜೂನ್ 7ರಂದು ಇಬ್ಬರು ಮಹಿಳೆಯರ ಕೊಲೆಗೈದು ರುಂಡ-ಮುಂಡ ಬೇರೆ ಮಾಡಿ ಮಂಡ್ಯದ ಬೇಬಿ ಗ್ರಾಮದ ಕೆರೆ ಹಾಗೂ ಅರಕೆರೆ ಸಮೀಪದ ಕಿರುನಾಲೆಯಲ್ಲಿ ಮೃತದೇಹ ಎಸೆದಿದ್ದ.
ನಾಪತ್ತೆ ಪ್ರಕರಣಗಳನ್ನು ಜಾಲಾಡಿದ್ರೂ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಇತ್ತ ದೇಹದ ಮೇಲ್ಭಾಗ ಸಿಗದೆ, ಮೃತರ ನಾಪತ್ತೆ ಪ್ರಕರಣವೂ ದಾಖಲಾಗದೆ ಪೊಲೀಸರಿಗೆ ತಲೆನೋವಾಗಿತ್ತು. ಹೀಗಿರೋವಾಗ ಜು.25ರಂದು ಚಾಮರಾಜನಗರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಕಾಲ್ ಲಿಸ್ಟ್ ಆಧರಿಸಿ ತನಿಖೆ ನಡೆಸಿದಾಗ 3 ಕೊಲೆ ಪ್ರಕರಣ ಬಯಲಾಗಿದೆ.
ಮೇ 30ರಂದು ಚಿತ್ರದುರ್ಗ ಮೂಲದ ಮಹಿಳೆಯೊಬ್ಬರ ಕೊಲೆಯಾಗಿತ್ತು. ಜು.3ರಂದು ಚಾಮರಾಜನಗರ ಮೂಲದ ಮತ್ತೊಂದು ಮಹಿಳೆಯ ಕೊಲೆಯಾಗಿತ್ತು. ಇಬ್ಬರನ್ನೂ ಮನೆಗೆ ಕರೆಸಿ ಕುತ್ತಿಗೆ ಬಿಗಿದು ಹತ್ಯೆಗೈದು, ನಂತರ ಇಬ್ಬರ ರುಂಡ ಮುಂಡ ಬೇರ್ಪಡಿಸಿ ನಾಲೆಗೆ ಎಸೆಯಲಾಗಿತ್ತು.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ