crime

ಮಂಡ್ಯದಲ್ಲಿ ಭೀಕರ ಹತ್ಯೆಯ ಆರೋಪಿ ಬಂಧನ :ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್

ಮಂಡ್ಯದಲ್ಲಿ ಕಳೆದ 2 ತಿಂಗಳ ಹಿಂದೆ ನಾಲೆಯಲ್ಲಿ ತೇಲಿಬಂದ ರುಂಡವಿಲ್ಲದ ಇಬ್ಬರು ಮಹಿಳೆಯರ ಮೃತದೇಹ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದುವೆಯಾಗಿದ್ದರೂ ಪರ ಸ್ತ್ರೀ ಮೋಹದ ಬಲೆಗೆ ಬಿದ್ದಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ ಮೂರು ಕೊಲೆ ಮಾಡಿದ್ದ. ಮಂಡ್ಯದಲ್ಲಿ 2 ತಿಂಗಳ ಹಿಂದೆ ನಾಲೆಯಲ್ಲಿ ಎರಡು ರುಂಡವಿಲ್ಲದ ಮೃತದೇಹ ತೇಲಿಬಂದಿತ್ತು.ಇದನ್ನು ಓದಿ –ಮೈಸೂರು ದಸರಾ 2022; ಆಗಸ್ಟ್‌ 7ಕ್ಕೆ ಗಜಪಯಣ ಆರಂಭ

ಈ ಪ್ರಕರಣದ ಬೆನ್ನುಬಿದ್ದ ಶ್ರೀರಂಗಪಟ್ಟಣ ಪೊಲೀಸರಿಗೆ ಲಿಂಕ್ ಸಿಕ್ಕಿದ್ದು ಚಾಮರಾಜನಗರದಲ್ಲಿನ ಒಂದು ಮಿಸ್ಸಿಂಗ್ ಕೇಸ್ ನಲ್ಲಿ ಆ ಮಿಸ್ಸಿಂಗ್ ಕೇಸ್ ಬೆನ್ನತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ನಿ ಸಂಬಂಧಿಯೊಂದಿಗೆ ಲವ್ವಿ-ಡವ್ವಿ:

ಬೆಂಗಳೂರು ಮೂಲದ ಸಿದ್ದಲಿಂಗಪ್ಪ(35) ಎಂಬಾತನೇ ಕೊಲೆ ಆರೋಪಿ. ಈತನಿಗೆ ಮದುವೆಯಾಗಿದ್ದರೂ ಪತ್ನಿ ಸಂಬಂಧಿಯ ಜೊತೆ ಲವ್‌ನಲ್ಲಿ ಬಿದ್ದಿದ್ದ. ಆದರೆ ಆಕೆಗೆ ವೇಶ್ಯಾವಟಿಕೆ ಲಿಂಕ್ ಇತ್ತು. ಇದನ್ನು ಸಿದ್ದಲಿಂಗಪ್ಪ ಸಹಿಲಾಗದೇ ಪ್ರೇಯಸಿಯ ಲಿಂಕ್‌ನಲ್ಲಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕೊಲೆಗೈಯ್ಯುತ್ತಿದ್ದ.

ಪ್ರೇಯಸಿಯ ಗುಂಗಲ್ಲಿ ಸಿದ್ದಲಿಂಗಪ್ಪ ಸೈಕೋ ಆಗಿದ್ದ. ಅದಕ್ಕಾಗಿ ಪ್ರೇಯಸಿಗೆ ಹಣ, ಚಿನ್ನಾಭರಣದ ಆಸೆ ಹುಟ್ಟಿಸಿ ಮೂವರು ಮಹಿಳೆಯರ ಕೊಲೆಗೈದಿದ್ದಾನೆ. ಜೂನ್ 7ರಂದು ಇಬ್ಬರು ಮಹಿಳೆಯರ ಕೊಲೆಗೈದು ರುಂಡ-ಮುಂಡ ಬೇರೆ ಮಾಡಿ ಮಂಡ್ಯದ ಬೇಬಿ ಗ್ರಾಮದ ಕೆರೆ ಹಾಗೂ ಅರಕೆರೆ ಸಮೀಪದ ಕಿರುನಾಲೆಯಲ್ಲಿ ಮೃತದೇಹ ಎಸೆದಿದ್ದ.

ನಾಪತ್ತೆ ಪ್ರಕರಣಗಳನ್ನು ಜಾಲಾಡಿದ್ರೂ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಇತ್ತ ದೇಹದ ಮೇಲ್ಭಾಗ ಸಿಗದೆ, ಮೃತರ ನಾಪತ್ತೆ ಪ್ರಕರಣವೂ ದಾಖಲಾಗದೆ ಪೊಲೀಸರಿಗೆ ತಲೆನೋವಾಗಿತ್ತು. ಹೀಗಿರೋವಾಗ ಜು.25ರಂದು ಚಾಮರಾಜನಗರದಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಕಾಲ್ ಲಿಸ್ಟ್ ಆಧರಿಸಿ ತನಿಖೆ ನಡೆಸಿದಾಗ 3 ಕೊಲೆ ಪ್ರಕರಣ ಬಯಲಾಗಿದೆ.

ಮೇ 30ರಂದು ಚಿತ್ರದುರ್ಗ ಮೂಲದ ಮಹಿಳೆಯೊಬ್ಬರ ಕೊಲೆಯಾಗಿತ್ತು. ಜು.3ರಂದು ಚಾಮರಾಜನಗರ ಮೂಲದ ಮತ್ತೊಂದು ಮಹಿಳೆಯ ಕೊಲೆಯಾಗಿತ್ತು. ಇಬ್ಬರನ್ನೂ ಮನೆಗೆ ಕರೆಸಿ ಕುತ್ತಿಗೆ ಬಿಗಿದು ಹತ್ಯೆಗೈದು, ನಂತರ ಇಬ್ಬರ ರುಂಡ ಮುಂಡ ಬೇರ್ಪಡಿಸಿ ನಾಲೆಗೆ ಎಸೆಯಲಾಗಿತ್ತು.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024