ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು : ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ

Team Newsnap
1 Min Read
Murder in Shimoga: A person was killed by miscreants ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು : ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ

ಶಿವಮೊಗ್ಗ ನಗರದಲ್ಲಿ ನಿನ್ನೆ ರಾತ್ರಿಯೂ ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.

ವಿಜಯ್ (37) ಕೊಲೆಯಾದ ದುರ್ದೈವಿ. ಶಿವಮೊಗ್ಗದ ವೆಂಕಟೇಶ ನಗರದ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮೃತ ವಿಜಯ್​ ಆಸ್ಪತ್ರೆವೊಂದರ ಅಕೌಂಟ್ಸ್​​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.ಇಂದು ಸೂರ್ಯಗ್ರಹಣ – ಯಾವ ರಾಶಿಗಳ ಮೇಲೆ ಪ್ರಭಾವ, ಪರಿಣಾಮ

ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ ವೈಯುಕ್ತಿಕ ಕಾರಣಕ್ಕಾಗಿ ವ್ಯಕ್ತಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಕುರಿತಂತೆ ಎಸ್​​ಪಿ ಮಿಥುನ್​​ ಕುಮಾರ್ ಮಾಹಿತಿ ನೀಡಿ ​, ಮೃತ ವ್ಯಕ್ತಿ ರಾತ್ರಿ 1:30ರ ವರೆಗೂ ಮನೆಯಲ್ಲೇ ಇದ್ದ. ಆ ನಂತರ ಆತನಿಗೆ ಯಾವುದೊ ಕರೆ ಬರುತ್ತೆ. ಆಗ ಮೃತ ವಿಜಯ್ ಅವರ ತಂದೆಗೆ ಕೆಲಸ ನಿಮಿತ್ತ ಹೊರಕ್ಕೆ ಹೋಗ್ತಿರೋದಾಗಿ ಹೇಳಿ ಮನೆಯಿಂದ ಹೊರ ಬರುತ್ತಾನೆ. ಸುಮಾರು 3 ಗಂಟೆ ಸಮಯದಲ್ಲಿ ಕೃತ್ಯ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಸ್ಥಳದಲ್ಲಿ ಕೆಲ ವಸ್ತುಗಳು ಲಭ್ಯವಾಗಿವೆ , ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಆಗುತ್ತದೆ ಎಂದು ತಿಳಿಸಿದರು.

Share This Article
Leave a comment