ಮುರುಘಾ ಸ್ವಾಮೀಜಿ ಪೋಕ್ಸೋ ಪ್ರಕರಣ : 4-5 ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ

Team Newsnap
1 Min Read

ಮುರುಘಾ ಶರಣರ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು ಗಂಗಾಧರಯ್ಯನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ ಮತ್ತು 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.ಇದನ್ನು ಓದಿ –ಮಗಳ ಹೆರಿಗೆಗಾಗಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಸುಪ್ರೀಂ ಅನುಮತಿ

ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗ ಸಿಟಿ ಸಿವಿಲ್‌ ಕೋರ್ಟ್‌ ನ್ಯಾಯಧೀಶರು ಆದೇಶಿಸಿದ್ದಾರೆ.

ಸದ್ಯ ಅವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಅವರ ಬಂಧನದ ಅವಧಿ ಮುಕ್ತಯವಾದ ಹಿನ್ನಲೆಯಲ್ಲಿ ಅವರನ್ನು ಇಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು, ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗದ ಅವಧಿಯನ್ನು ಅ.21ರವರೆಗೆ ವಿಸ್ತರಣೆ ಮಾಡಿದರು.

Share This Article
Leave a comment