ಸ್ವಾತಂತ್ರ್ಯದ ಬಳಿಕ ದೇಶದಲ್ಲಿ 14 ಮಂದಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪ್ರತಿಯೊಬ್ಬರ ಕಥೆ ಹೇಳುವ ವಸ್ತು ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಲಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆಯ ಅಂಗವಾಗಿ ಉದ್ಘಾಟನೆಯಾಗಲಿರುವ ವಸ್ತುಸಂಗ್ರಹಾಲಯ ಸ್ವಾತಂತ್ರ್ಯದ ಬಳಿಕದ ಭಾರತದ ಕಥೆ, ಪ್ರಧಾನ ಮಂತ್ರಿಗಳ ಜೀವನ ಹಾಗೂ ಅವರು ನೀಡಿರುವ ಕೊಡುಗೆಗಳನ್ನು ತಿಳಿಸಲಿದೆ.
ನವದೆಹಲಿಯ ತೀನ್ ಮೂರ್ತಿ ಕಾಂಪ್ಲೆಕ್ಸ್ನಲ್ಲಿರುವ ಈ ವಸ್ತುಸಂಗ್ರಹಾಲಯ ದೇಶದ ಎಲ್ಲಾ 14 ಪ್ರಧಾನ ಮಂತ್ರಿಗಳ ಬಗ್ಗೆ ಜನರಿಗೆ ತಿಳಿಸಲು ಅಭಿವೃದ್ಧಿಪಡಿಸಲಾಗಿದೆ ಹಾಗೂ ಭವಿಷ್ಯದಲ್ಲಿ ನಾಯಕರಾಗುವವರಿಗೂ ಇಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಸಾಕಷ್ಟು ಸ್ಥಳಾವಕಾಶವಿದೆ ಎಂದು ಸರ್ಕಾರ ಹೇಳಿದೆ.
ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮವಹಿಸಿದ, ದೇಶಕ್ಕೆ ಕೊಡುಗೆ ನೀಡಿದ, ಸ್ವಾತಂತ್ರ್ಯ ನಂತರದ ಪ್ರತಿಯೊಬ್ಬ ಪ್ರಧಾನ ಮಂತ್ರಿಗಳ ಅಧಿಕಾರ ಅಥವಾ ಸಿದ್ಧಾಂತವನ್ನು ಲೆಕ್ಕಿಸದೇ ಈ ವಸ್ತು ಸಂಗ್ರಹಾಲಯದ ನಿರ್ಮಾಣ ಮಾಡಲಾಗಿದೆ.
ಇದು ಯುವ ಪೀಳಿಗೆಯನ್ನು ಪ್ರೇರೇಪಿಸುವ ಗುರಿ ಹೊಂದಿದೆ ಎಂದು ಮೋದಿ ತಿಳಿಸಿದ್ದಾರೆ.
ಹೊಲೊಗ್ರಾಮ್ಗಳು, ವರ್ಚುವಲ್ ರಿಯಾಲಿಟಿ, ಮಲ್ಟಿ-ಟಚ್, ಮಲ್ಟಿಮೀಡಿಯಾ, ಸಂವಾದಾತ್ಮಕ ಕಿಯೋಸ್ಕ್ಗಳು, ಕಂಪ್ಯೂಟರೀಕೃತ ಚಲನ ಶಿಲ್ಪಗಳು, ಸ್ಮಾರ್ಟ್ಫೋನ್ ಅಪ್ಲಿಕೇಶನ್ಗಳು, ಸಂವಾದಾತ್ಮಕ ಪರದೆಗಳು ಹೀಗೆ ಮೊದಲಾದ ಫೀಚರ್ಗಳನ್ನು ಅಳವಡಿಸಲಾಗಿದೆ.
ಮ್ಯೂಸಿಯಂನಲ್ಲಿ ಒಟ್ಟು 43 ಗ್ಯಾಲರಿಗಳಿವೆ. ಇದು ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನ ರಚನೆ ಬಗೆಗಿನ ಪ್ರದರ್ಶನ ಆರಂಭಗೊಂಡು, ಪ್ರಧಾನ ಮಂತ್ರಿಗಳು ರಾಷ್ಟ್ರವನ್ನು ಹೇಗೆ ಹೊಸದಾಗಿ ನಿರ್ಮಾಣ ಮಾಡಿದರು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ಕಥೆಯನ್ನು ಮ್ಯೂಸಿಯಂ ಹೇಳುತ್ತದೆ.
ಪಿಎಂ ಮ್ಯೂಸಿಯಂಗೆ ವಿರೋಧ:
2018ರಲ್ಲಿ ನರೇಂದ್ರ ಮೋದಿ ಮ್ಯೂಸಿಯಂ ನಿರ್ಮಾಣದ ಬಗ್ಗೆ ಘೋಷಿಸಿದಾಗ ಇದು ಜವಾಹರಲಾಲ್ ನೆಹರು ಅವರ ಪರಂಪರೆಯನ್ನು ಟೀಕಿಸುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment