ಬಿಜೆಪಿ ಗೆಲುವು ಸಂಭ್ರಮಿಸಿದ ಮುಸ್ಲಿಂ ಯುವಕನ ಹತ್ಯೆ – ತನಿಖೆಗೆ ಯೋಗಿ ಆದೇಶ

Team Newsnap
1 Min Read
Arrival of UP CM Yogi Aditya in Mandya: Road show for BJP ನಾಡಿದ್ದು ಮಂಡ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯ‌ ಆಗಮನ : ಬಿಜೆಪಿ ಪರ ರೋಡ್‌ ಶೋ

ಉತ್ತರ ಪ್ರದೇಶದ ಕುಶಿನಗರದಲ್ಲಿ ಭಾರತೀಯ ಜನತಾ ಪಕ್ಷ ಪರ ಪ್ರಚಾರ ನಡೆಸಿದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಮೃತ ದುರ್ದೈವಿಯನ್ನು ಬಾಬರ್ ಅಲಿ(25) ಹೇಳಲಾಗಿದೆ

ಚುನಾವಣಾ ಸಮಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಅಲ್ಲದೇ ಇತ್ತೀಚೆಗೆ ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಆಚರಿಸಿದ್ದರು. ಹೀಗಾಗಿ ಭಾನುವಾರ ಬಾಬರ್ ಅಲಿಯನ್ನು ನೆರೆಹೊರೆಯವರು ಥಳಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 20 ರಂದು ಬಾಬರ್ ಅಲಿ ಅವರನ್ನು ಕಥರ್‍ಗರ್ಹಿಯಲ್ಲಿ ಥಳಿಸಲಾಯಿತು. ನಂತರ ಅವರನ್ನು
ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭಾನುವಾರ ಬಾಬರ್ ಅಲಿ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿತ್ತು. ಆದರೆ ಅವರ ಕುಟುಂಬಸ್ಥರು ಅಂತ್ಯಕ್ರಿಯೆಯನ್ನು ಮಾಡಲು ನಿರಾಕರಿಸಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Share This Article
Leave a comment