ಈ ಎಚ್.ಡಿ.ಕುಮಾರಸ್ವಾಮಿ ಮುಸಲ್ಮಾನರನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ. ಬಲಿ ಕೊಡೋದಕ್ಕೆ ಅವರಿಗೆ ಸಿಗೋದೆ ಅಲ್ಪಸಂಖ್ಯಾತರು ಎಂದು ಶಾಸಕ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಜೆಡಿಎಸ್ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಎಂಎಲ್ಸಿ ಟಿಕೆಟ್ ಕೊಟ್ಟಿದ್ದಾರೆ. ಅಲ್ಲಿ ಮುಸ್ಲಿಂ ಅಭ್ಯರ್ಥಿ ಗೆಲ್ಲೋಕೆ ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ಮುಸಲ್ಮಾನರ ಮೇಲೆ ಪ್ರೀತಿ ಇದ್ದರೆ ಹಾಸನ, ಮಂಡ್ಯದಲ್ಲಿ ಟಿಕೆಟ್ ಕೊಡಬೇಕಿತ್ತು. ರೇವಣ್ಣರ ಮಗನಿಗೆ ಟಿಕೆಟ್ ಕೊಡುವ ಬದಲು ಕಾರ್ಯಕರ್ತರಿಗೊ, ಮುಸ್ಲಿಂ ಅಭ್ಯರ್ಥಿಗೊ ಟಿಕೆಟ್ ಕೊಡಬಹುದಿತ್ತು. ಮೈಸೂರು, ಮಂಡ್ಯ ಅಥವಾ ತುಮಕೂರಿನಲ್ಲಿ ಕೊಡಬೇಕಿತ್ತು. ಮುಸ್ಲಿಮರಿಗೆ ಕೊಟ್ಟಂತೆಯೂ ಆಗಬೇಕು, ಬಿಜೆಪಿಗೆ ಸಹಾಯ ಮಾಡಿದಂತೆಯೂ ಆಗಬೇಕು ಎಂಬ ಕಾರಣಕ್ಕೆ ಸೋಲುವ ಕಡೆ ಟಿಕೆಟ್ ಕೊಟ್ಟಿದ್ದಾರೆ ಎಂದರು.
ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಮುಸಲ್ಮಾನರೇ ಸಿಗೋದು. ಗೆಲ್ಲುವ ಕಡೆ ಕೊಟ್ಟರೆ ಕುಮಾರಸ್ವಾಮಿ ಅವರಿಗೂ ಪ್ರೀತಿ ಇದೆ ಅಂತ ಒಪ್ಪಿಕೊಳ್ಳುತ್ತೇನೆ. ರಾಮನಗರಕ್ಕೆ ರಾಜೀನಾಮೆ ಕೊಟ್ಟಾಗ ಅನಿತಕ್ಕನಿಗೆ ಟಿಕೆಟ್ ಕೊಡುವ ಬದಲು ಮುಸ್ಲಿಮರಿಗೆ ಕೊಡಬಹುದಿತ್ತು. ಜೆಡಿಎಸ್ನಿಂದ ನೂರಕ್ಕೆ ನೂರರಷ್ಟು ಮುಸಲ್ಮಾನರಿಗೆ ಅನ್ಯಾಯವಾಗುತ್ತಿದೆ. ಜೆಡಿಎಸ್ ಗೆಲ್ಲುವ ಕಡೆ ಅಲ್ಪಸಂಖ್ಯಾತರು ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment