ಮೈಸೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ 319 ಕೋಟಿ ರೂಪಾಯಿ ಭೂಸ್ವಾಧೀನ ಅನುದಾನ ಮೀಸಲಿಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಅವರು ತಿಳಿಸಿದ್ದಾರೆ. ಇದರಿಂದ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಮತ್ತಷ್ಟು ಗತಿ ಸಿಗಲಿದೆ.
ಸಂಸದ ಯದುವೀರ್ ಸಲಹೆ:
ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ಅನುದಾನದ ಕೊರತೆ ಈ ಕಾರ್ಯಕ್ಕೆ ಅಡಚಣೆಯಾಗಿದ್ದು, ರಾಜ್ಯ ಸರ್ಕಾರ ಭೂಮಾಲೀಕರಿಗೆ ಬಾಕಿ ಇರುವ ಪಾವತಿಗಳನ್ನು ತಕ್ಷಣ ತೆರವುಗೊಳಿಸಬೇಕು ಮತ್ತು ಭೂಮಿಯನ್ನು ಎಎಐಗೆ ತ್ವರಿತವಾಗಿ ವರ್ಗಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮೈಸೂರಿಗೆ ಫಿಲ್ಮ್ ಸಿಟಿ:
ಮೈಸೂರಿನಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ 150 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಜೊತೆಗೆ, ನಂದಿನಿ ಲೇಔಟ್ನಲ್ಲಿ ಚಲನಚಿತ್ರ ಅಕಾಡೆಮಿ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ.
ಹೈ-ಟೆಕ್ ಮತ್ಸ್ಯದರ್ಶಿನಿ:
ಮೈಸೂರಿನಲ್ಲಿ ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಹೈ-ಟೆಕ್ ಮತ್ಸ್ಯದರ್ಶಿನಿ ಪ್ರಾರಂಭಿಸಲಾಗುವುದು. ರಾಜ್ಯದ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಇದನ್ನು ಓದಿ –Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಈ ಎಲ್ಲಾ ಯೋಜನೆಗಳು ಮೈಸೂರಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು