ಮೈಸೂರು ದಸರಾದ ವೈಶಿಷ್ಟ್ಯಗಳಲ್ಲಿ ದೀಪಾಲಂಕಾರವೂ ಒಂದು. ಆದರೆ ಕೊರೋನಾ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಆದಷ್ಟು ಸರಳವಾಗಿ ಆಚರಿಸಲು ಯೋಚಿಸಿರುವ ಸರ್ಕಾರ, ದೀಪಾಲಂಕಾರವನ್ನು ದಿನಕ್ಕೆ 2 ರಿಂದ 3 ಗಂಟೆಗಳಂತೆ 10 ದಿನಕ್ಕೆ ಮಾತ್ರ ಸೀಮಿತಗೊಳಿಸಿದೆ.
ಕೋವಿಡ್ ಹಿನ್ನಲೆಯಲ್ಲಿ ಎಲ್ಲೆಡೆಯಿಂದಲೂ ವಿಜೃಂಭಣೆಯ ದಸರಾ ಬೇಡ ಎಂಬ ಕೂಗು ಕೇಳಿಬಂದಿತ್ತು. ಹೆಚ್ಚಿನ ಜನಸಂದಣಿಯಿಂದ ಕೊರೋನಾ ಸ್ಪೋಟವಾಗಬಹುದು ಎಂಬ ಮುಂದಾಲೋಚನೆ ಇದರಲ್ಲಿ ಸೇರಿಕೊಂಡಿತ್ತು. ಹಾಗಾಗಿ ರಾಜ್ಯ ಸರ್ಕಾರ ಸರಳ ದಸರಾ ಆಚರಣೆಗೆ ಒತ್ತು ಕೊಟ್ಟಿದೆ.
ದೀಪಾಲಂಕಾರದ ಕುರಿತಂತೆ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸು ಮಾಡಿದೆ. ಸಂಜೆ 7 ರಿಂದ 10 ಗಂಟೆಗಳ ವರಗೆ ಮಾತ್ರ ವಿದ್ಯುತ್ ದೀಪಾಲಂಕಾರವಿರುತ್ತದೆ. ಕೆಲವು ಆಯ್ದ ಸ್ಥಳಗಳಲ್ಲಿ ಮಾತ್ರ ದೀಪಾಲಂಕರಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ದೀಪಾಲಂಕಾರ ವೀಕ್ಷಣೆಯ ಸಮಯದಲ್ಲಿ ಮಾಸ್ಕ್ ಧರಿಸುವಿಕೆ, ಕೊರೋನಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಅಲ್ಲದೇ ದಸರಾ ವೀಕ್ಷಣೆಯನ್ನು ಮಾಡುವ ಜನಸಂದಣಿಗೆ ಮಿತಿ ಹೇರಿರುವ ತಜ್ಞರ ತಂಡ, ಕೇವಲ 300 ಜನಕ್ಕೆ ದಸರಾ ವೀಕ್ಷಿಸಲು ಅನುಮತಿ ನೀಡಬೇಕು, 200 ಜನ ಮಾತ್ರ ಚಾಮುಂಡಿಬೆಟ್ಟದ ದರ್ಶನ ಮಾಡಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 50 ಜನ ಮಾತ್ರ ಸೇರಬೇಕೆಂದು ಶಿಫಾರಸು ಮಾಡಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment