ನ್ಯೂಸ್ ಸ್ನ್ಯಾಪ್.
ಮೈಸೂರು.
ಕರೋನಾ ಹಿನ್ನಲೆಯಲ್ಲಿ ಈ ವರ್ಷ ಸರಳ ದಸರಾವನ್ನು ಆಚರಿಸಲು ಮುಂದಾಗಿರುವ ಸರ್ಕಾರದ ನಡೆಯನ್ನು ಖಂಡಿಸಿರುವ ವಾಟಾಳ್ ನಾಗರಾಜ್ ವೈಭವಯುತವಾದ ದಸರಾ ಆಚರಣೆಗೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ದಸರಾಕ್ಕೆ ಅದರದೇ ಆದ ವಿಶೇಷವಿದೆ. ಪ್ರತಿ ವರ್ಷ ಅನೇಕ ಕಲಾವಿದರು ಅನೇಕ ಕಲೆಗಳನ್ನು ಪ್ರದರ್ಶಿಸುತ್ತಾರೆ. ಯಡಿಯೂರಪ್ಪನವೆರೇ, ಇವರಾರು ನಿಮಗೆ ಕಾಣಲಿಲ್ಲವೇ?’ ಎಂದು ಪ್ರಶ್ನೆ ಮಾಡಿದರು.
‘ಕೇವಲ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮಾಡಿಸುವುದು ಬೇಡ. ಅರಮನೆಯಿಂದ ಬನ್ನಿ ಮಂಟಪಕ್ಕೆ ಮೆರವಣಿಗೆ ಹೋಗಲಿ. ಪ್ರತಿ ವರ್ಷದಂತೆ ಈ ವರ್ಷವೂ ಕಲೆಗಳ ಪ್ರದರ್ಶನವಾಗಲಿ. ಒಂದು ವೇಳೆ ಕನ್ನಡದ ಕಲಾವಿದರನ್ನು ಬಿಟ್ಟು ಬೇರೆ ಕಲಾವಿದರನ್ನು ಕರೆಸಿದರೆ ಉತ್ಸವದಲ್ಲಿ ನಾನೇ ಖುದ್ದಾಗಿ ಕಪ್ಪು ಬಾವುಟವನ್ನು ಪ್ರದರ್ಶಿಸುತ್ತೇನೆ’ ಎಂದು ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ