ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ಶುಭಾರಂಭ ಮಾಡಲಾಗುವುದು.
ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45ರ ನಡುವೆ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಈ ಪೂಜೆಯ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಖ್ಯಾತ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಈ ಬಾರಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಗಣ್ಯರು ಉಪಸ್ಥಿತರಿರುತ್ತಾರೆ.
ಅಕ್ಟೋಬರ್ 2:
ಅಕ್ಟೋಬರ್ 3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಾರ್ಯಾಚರಣೆಗಳನ್ನು ಅನುಷ್ಠಾನಗೊಳಿಸಲಾಗಿದೆ. 5000ಕ್ಕೂ ಹೆಚ್ಚು ಪೊಲೀಸರನ್ನು ವಿಶೇಷ ಭದ್ರತೆಯಿಗಾಗಿ ನಿಯೋಜಿಸಲಾಗಿದೆ. 13,670 ಸಿಸಿ ಕ್ಯಾಮೆರಾ ಮಾಧ್ಯಮವನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು ,ಮಹಿಳೆಯರ ರಕ್ಷಣೆಗಾಗಿ ಚಾಮುಂಡಿ ಕಾರ್ಯ ಪಡೆ ಕೂಡ ದಸರಾ ಸಂದರ್ಭದಲ್ಲಿದೆ.ಇದನ್ನು ಓದಿ –ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು
ವಿಜಯದಶಮಿ ದಿನ, ಅಕ್ಟೋಬರ್ 12ರಂದು, ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು