Karnataka

ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ

ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ 2024ರ ಸಂಭ್ರಮವು ಹೆಚ್ಚುತ್ತಿದ್ದು , ನಾಳೆ ನಾಡ ಹಬ್ಬಕ್ಕೆ ಅಧಿಕೃತವಾಗಿ ಚಾಲನೆ ದೊರಕಲಿದೆ.

ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ಶುಭಾರಂಭ ಮಾಡಲಾಗುವುದು.

ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45ರ ನಡುವೆ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಈ ಪೂಜೆಯ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಖ್ಯಾತ ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಈ ಬಾರಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಗಣ್ಯರು ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮಗಳ ವಿವರ

ಅಕ್ಟೋಬರ್ 2:

  • ಮಾಹಿತಿ: ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.
  • ಸಂಗೀತ ವಿದ್ವಾನ್ ಪ್ರಶಸ್ತಿ: ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
  • ಚಲನಚಿತ್ರೋತ್ಸವ: ಬೆಳಗ್ಗೆ 11.30ರ ವೇಳೆ ಉದ್ಘಾಟನೆ.
  • ಫಲ ಪುಷ್ಪ ಪ್ರದರ್ಶನ: ಬೆಳಗ್ಗೆ 12.30ರ ವೇಳೆ ಉದ್ಘಾಟನೆ.
  • ಕುಸ್ತಿ ಪಂದ್ಯಾವಳಿ: ಸಂಜೆ 4.00ಕ್ಕೆ ಉದ್ಘಾಟನೆ.
  • ರಾಜ್ಯದ ದಸರಾ ಸಿ.ಎಂ. ಕಪ್ ಕ್ರೀಡಾಕೂಟ: ಸಂಜೆ 4.30ಕ್ಕೆ ನಡೆಯಲಿದೆ.
  • ವಸ್ತು ಪ್ರದರ್ಶನ: ಸಂಜೆ 7.30ಕ್ಕೆ ಉದ್ಘಾಟನೆ.

ಪೊಲೀಸ್ ಬಂದೋಬಸ್ತ್

ಅಕ್ಟೋಬರ್ 3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಾರ್ಯಾಚರಣೆಗಳನ್ನು ಅನುಷ್ಠಾನಗೊಳಿಸಲಾಗಿದೆ. 5000ಕ್ಕೂ ಹೆಚ್ಚು ಪೊಲೀಸರನ್ನು ವಿಶೇಷ ಭದ್ರತೆಯಿಗಾಗಿ ನಿಯೋಜಿಸಲಾಗಿದೆ. 13,670 ಸಿಸಿ ಕ್ಯಾಮೆರಾ ಮಾಧ್ಯಮವನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು ,ಮಹಿಳೆಯರ ರಕ್ಷಣೆಗಾಗಿ ಚಾಮುಂಡಿ ಕಾರ್ಯ ಪಡೆ ಕೂಡ ದಸರಾ ಸಂದರ್ಭದಲ್ಲಿದೆ.ಇದನ್ನು ಓದಿ –ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು

ವಿಜಯದಶಮಿ ದಿನ, ಅಕ್ಟೋಬರ್ 12ರಂದು, ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ.

0Love
0Haha
0Shocked
0Sad
0Angry
Team Newsnap
Leave a Comment

Recent Posts

ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ

ಬೆಂಗಳೂರು: ಡಿಸೆಂಬರ್ 29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಮರುಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ… Read More

October 2, 2024

ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು

ಬೀದರ್ : ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ ರಾಯಚೂರಿನ ಮೂಲದ… Read More

October 2, 2024

ಸಿಎಂ ಪತ್ನಿ ಪಾರ್ವತಿ ಮುಡಾಗೆ ಮರಳಿ ನೀಡಿದ 14 ಸೈಟ್‌ಗಳ ಖಾತೆ ರದ್ದು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ನೀಡಿದ್ದ 14 ಸೈಟ್‌ಗಳನ್ನು ಮರಳಿ ವಾಪಸ್ ಮಾಡಿದ್ದಾರೆ. ಈ… Read More

October 2, 2024

ಪಿತೃಪಕ್ಷ ಪೂಜೆ: ಹೆಜ್ಜೇನಿನ ದಾಳಿಗೆ ವ್ಯಕ್ತಿ ಸಾವು, ಐವರಿಗೆ ಗಾಯ

ಕೋಲಾರ:ತಾಲ್ಲೂಕಿನ ಜಂಗಾಲಹಳ್ಳಿ ಬಳಿ ಮಂಗಳವಾರ ಪಿತೃಪಕ್ಷ ಪೂಜೆಯ ವೇಳೆ ಹೆಜ್ಜೇನಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ… Read More

October 2, 2024

ಬಾಂಗ್ಲಾ ವಿರುದ್ಧ 2-0 ಸರಣಿ ಗೆಲುವು: ವಿಶ್ವಕ್ಕೆ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತವೇ ನಂಬರ್ ಒನ್

ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ… Read More

October 2, 2024

Gandhi Jayanti: ಪ್ರಧಾನಿ ಮೋದಿಯಿಂದ ರಾಷ್ಟ್ರಪಿತನಿಗೆ ಪುಷ್ಪ ನಮನ

ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು… Read More

October 2, 2024