Categories: Main News

ಮೈಸೂರು ಡಿಸಿ ರೋಹಿಣಿ ವರ್ಗಾವಣೆ ವಿವಾದ – ಸಿಎಟಿ ತೀರ್ಪು ಪ್ರಕಟ : ಅಡ್ಡಗೋಡೆ ಮೇಲೆ ದೀಪದಂತೆ ಆದೇಶ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಕುರಿತಂತೆ ಸಿಎಟಿ ಸೋಮವಾರ ತನ್ನ ತೀರ್ಪು ಪ್ರಕಟಿಸಿದೆ.

2 ವಾರದೊಳಗೆ ತೀರ್ಪು ನೀಡಬೇಕೆಂಬ ಹೈಕೋರ್ಟ್ ಆದೇಶದಂತೆ ಸಿಎಟಿ ಕೇವಲ ಮೂರು ದಿನದಲ್ಲೇ ತೀರ್ಪು ನೀಡಿದೆ.

ಮೈಸೂರು ಡಿಸಿಯಾಗಿದ್ದ ಶರತ್ ಅವರನ್ನು ಬೇರೆಡೆ ವರ್ಗಾವಣೆ ಮಾಡಿ. ಆ ಸ್ಥಳಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಯಿತು. ‌

ರಾಜ್ಯ ಸರ್ಕಾರದ ಆದೇಶವನ್ನು ಸಕ್ಷಮ ಪ್ರಾಧಿಕಾರ ಅಂದರೆ ಸರ್ಕಾರವೇ ಮರು ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ಸೂಚನೆ ನೀಡಿದೆ.

ಸಿಎಟಿ ತನ್ನ 31 ಪುಟಗಳ ಆದೇಶದಲ್ಲಿ ವರ್ಗಾವಣೆ ಮರು‌ ಪರಿಶೀಲನೆ ಮಾಡುವಂತೆ ಸೂಚಿಸಿದೆ.

ತಮ್ಮನ್ನು ಅವಧಿ ಪೂರ್ವ ವರ್ಗಾವಣೆ ಮಾಡಲಾಗಿದೆ ಎಂದು ನಿರ್ಗಮಿತ ಡಿಸಿ ಶರತ್ ಸಿಎಟಿ ಮೊರೆ ಹೋಗಿದ್ದರು. ಆದರೆ ಸಿಎಟಿ ವಾದ- ಪ್ರತಿವಾದ ಆಲಿಸಿದರೂ ಡಿಸೆಂಬರ್ 22, 2020 ರ ನಂತರ ಯಾವುದೇ ತೀರ್ಪು ನೀಡಿರಲಿಲ್ಲ . ಈ ಸಂಬಂಧ ಸಿಎಟಿ ಧೋರಣೆ ವಿರೋಧಿಸಿ ಶರತ್ ಹೈಕೋರ್ಟ್ ಮೊರೆ ಹೋಗಿದ್ದರು.

ಹೈಕೋರ್ಟ್ ನ್ಯಾಯಾಧೀಶ ನ್ಯಾ. ವಿಶ್ವಜಿತ್ ಮತ್ತು ನ್ಯಾ. ಸತೀಶ್ ಚಂದ್ರ ಅವರಿದ್ದ ಪೀಠವು, ಡಿಸೆಂಬರ್ 22 ನಂತರ 3 ವಾರದೊಳಗೆ ತೀರ್ಪು ನೀಡಬೇಕಿತ್ತು. ಆದರೆ ಸಿಎಟಿ ನೀಡಿಲ್ಲ. ಆದ ಕಾರಣ 2 ವಾರದೊಳಗೆ ತೀರ್ಪು ನೀಡುವಂತೆ ಹೈಕೋರ್ಟ್ ಸಿಎಟಿಗೆ ಆದೇಶಿಸಿದರು.

ಸಿಎಟಿ ಎರಡು ವಾರ ಕಾಯದೆ, ಕೇವಲ ಮೂರು ದಿನದಲ್ಲಿ ತೀರ್ಪು ನೀಡಿದೆ. ಆದರೆ ಸಿಎಟಿ ತೀರ್ಪು
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತಿದೆ. ವರ್ಗಾವಣೆ ಕುರಿತಂತೆ ಹಿಂದಿನ ತೀರ್ಮಾನವನ್ನು ಸರ್ಕಾರವೇ ಮರು ಪರಿಶೀಲನೆ ಮಾಡಬೇಕೆಂದು ಸೂಚನೆ ನೀಡಿದೆ.

ಈಗ ಮತ್ತೆ ವರ್ಗಾವಣೆ ವಿವಾದದ ಪರಿಹಾರದ ಕ್ರಮಗಳು ಸರ್ಕಾರದ ಅಂಗಳದಲ್ಲಿದೆ. ಈಗ ಸರ್ಕಾರ ಯಾವ ತೀರ್ಮಾನ ಮಾಡುತ್ತದೆ ಎಂದು ಕಾದು ನೋಡಬೇಕು.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024