ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆ ಪ್ರಕರಣ ಸಿಎಟಿಯಲ್ಲಿ ಇನ್ನೂ ವಿಚಾರಣೆ ನಡೆಯುತ್ತಿದ್ದರೂ ಅದರ ಸುತ್ತ ನಡೆಯುತ್ತಿರುವ ಒಂದೊಂದು ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ.
ನಿರ್ಗಮಿತ ಡಿಸಿ ಬಿ.ಶರತ್ ವಿರುದ್ಧ ರಾಜ್ಯ ಸರ್ಕಾರವೇ ವಾರದ ಹಿಂದೆ 10 ಪುಟಗಳ ಅಫಿಡವಿಟ್ ಸಲ್ಲಿಸಿದೆ. ಆ ಪುಟಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ, ಸರ್ಕಾರ ಸಲ್ಲಿಸಿರುವ ಈ ಅಫಿಡವಿಟ್ ಅನ್ನು ಡಿ.14ರ ವಿಚಾರಣೆ ವೇಳೆ ಸಿಎಟಿ ಪರಿಗಣಿಸದ ಕಾರಣಕ್ಕೆ ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂಬುದು ಈಗಿನ ಚರ್ಚೆಯ ವಸ್ತು ವಾಗಿದೆ.
ಸರ್ಕಾರದ ಇಷ್ಟೆಲ್ಲಾ ಕಸರತ್ತು ನಡೆಸಿ ಸಲ್ಲಿಸಿರುವ ಅಫಿಡವಿಟ್ ಅನ್ನು ಸಿಎಟಿ
ವಿಚಾರಣೆ ವೇಳೆ ಪರಿಗಣಿಸಲಿಲ್ಲ. ಬದಲಿಗೆ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಮರುನೇಮಕ ಮಾಡಿ ಡಿ.22ರೊಳಗೆ ಆದೇಶ ಪ್ರಕಟಿಸುವಂತೆ ನಿರ್ದೇಶನ ನೀಡಿದೆ.
ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ ರಾಜ್ಯ ಸರ್ಕಾರ, ಆ ಜಾಗದಲ್ಲಿದ್ದ ಬಿ.ಶರತ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿತ್ತು. ಈ ವಿಚಾರವಾಗಿ ಶರತ್ ಸಿಎಟಿ ಮೆಟ್ಟಿಲೇರಿದ್ದರು. ವಿಚಾರಣೆ ಕೂಡ 9 ಬಾರಿ ನಡೆದು ಡಿ.22ರಂದು ಅಂತಿಮ ನಿರ್ಧಾರ ಪ್ರಕಟವಾಗುತ್ತದೆ ಎಂಬ ಸುದ್ದಿಯೂ ಸದ್ದು ಮಾಡಿದೆ.
ಈ ನಡುವೆ ಕಳೆದ ನ.9ರಂದು ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವಿರುದ್ಧ ಅಫಿಡೇವಿಟ್ ಸಲ್ಲಿಸಿರುವ ಮಾಹಿತಿ ಬಹಿರಂಗವಾಗಿದೆ.
ಈ ಅಂಶಗಳನ್ನು ಪರಿಗಣಿಸಿ ಬಿ.ಶರತ್ ಅವರು ಸಿಎಟಿ ಮುಂದೆ ಸಲ್ಲಿಸಿರುವ ಅರ್ಜಿ ವಜಾ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ಸಿಎಟಿಗೆ ಮನವಿ ಮಾಡಿದೆ ಎನ್ನಲಾಗಿದೆ.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More
This website uses cookies.
Leave a Comment