ಮೈಸೂರು- ಕುಶಾಲ️ನಗರ ಚತುಷ್ಪಥ ನಿರ್ಮಾಣ ಕಾಮಗಾರಿಗಾಗಿ ಆದಷ್ಟು ಬೇಗ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದ ಪ್ರತಾಪ ಸಿಂಹ ಸೋಮವಾರ ಅಧಿಕಾರಿಗಳಿಗೆ ಸೂಚಿಸಿದರು.ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ- ಸಚಿವ ಸುನಿಲ್ ಕುಮಾರ್
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೆದ್ದಾರಿ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲ️ನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು- ಬೆಂಗಳೂರು ದಶಪಥ ಕಾಮಗಾರಿ ಪೂರ್ಣಗೊಂಡಿದೆ, ಮಾರ್ಚ್ ಮೊದಲ️ ಅಥವಾ ಎರಡನೇ ವಾರದಲ್ಲಿ ಪ್ರಧಾನಿ ಅವರು ಉದ್ಘಾಟಿಸುವರು. ಇದೇ ವೇಳೆ ಮೈಸೂರು- ಕುಶಾಲ️ನಗರ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ತಿಳಿಸಿದರು.
ಈ ಸಂಬಂಧ ನಿರಂತರವಾಗಿ ಸಭೆ ನಡೆಸಲಾಗಿದೆ. ಮಾ. 5 ರೊಳಗೆ ಬಾಕಿ ಕೆಲ️ಸ ಪೂರ್ಣಗೊಳಿಸುವಂತೆ ಕೋರುವ ಜೊತೆಗೆ ಸೂಚನೆಯನ್ನೂ ನೀಡುತ್ತಿದ್ದೆನೆ ಎಂದು ಸಂಸದರು ತಿಳಿಸಿದರು.
ಮೈಸೂರು, ಹುಣಸೂರು, ಪಿರಿಯಾಪಟ್ಟಣ ತಹಶೀಲ್ದಾರ್ ಗಳು ಹಾಗೂ ಭೂ ದಾಖಲೆಗಳ ಉಪ ನಿರ್ದೆಶಕರು ಹೆದ್ದಾರಿ ಮಾರ್ಗವಾಗಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಹಾಗೂ ದುರಸ್ತ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ರಾಷ್ಟೀಯ ಹೆದ್ದಾರಿ ಉದ್ದಕ್ಕೂ ಇರುವ ಸಬ್ ಸ್ಟೇಷನ್ ಗಳು ಹಾಗೂ ವಿದ್ಯುತ್ ಗ್ರಿಡ್ ಗಳನ್ನು ಸ್ಧಳಾಂತರಿಸಲು ಅಗತ್ಯ ಕ್ರಮವಹಿಸುವಂತೆ ಸಂಸದರು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಅಧಿಕಾರಿಗಳು ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ಯಾವುದಾದರೂ ಸಮಸ್ಯೆಗಳಿದ್ದರೆ ಅದನ್ನು ಮುಕ್ತವಾಗಿ ಹೇಳಿಕೊಳ್ಳಬೇಕು. ಅದನ್ನು ನಾವು ಪರಿಹರಿಸುತ್ತೇವೆ. ಕಾಲಮಿತಿಯಲ್ಲಿ ಯೋಜನೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಂ, ಮೈಸೂರು-ಬೆಂಗಳೂರು ಹೆದ್ದಾರಿಯ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್, ಡಿಸಿಎಫ್ ಬಸವರಾಜ್ ,ಭೂಸ್ವಾಧೀನಾಧಿಕಾರಿ ಹರ್ಷವರ್ಧನ್, ಹುಣಸೂರು ತಹಶೀಲ್ದಾರರು ಹಾಗೂ ಭೂ ದಾಖಲೆ ಅಧಿಕಾರಿಗಳು ಪಿರಿಯಾಪಟ್ಟಣ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment