ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್7 ರಿಂದ 15 ರ ತನಕ ದೀಪಾಲಂಕಾರಗಳೊಂದಿಗೆ ಮೈಸೂರು ರೈಲ್ವೆ ವಸ್ತುಸಂಗ್ರಹಾಲಯದ ಕೆಲಸದ ಸಮಯವನ್ನು ರಾತ್ರಿ 8 ರ ವರೆಗೆ ವಿಸ್ತರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ.
ರೈಲ್ವೆ ವಸ್ತುಸಂಗ್ರಹಾಲಯದ ಎಲ್ಲ ವಿಂಟೇಜ್ ಸ್ಟೀಮ್ ಲೋಕೋಮೋಟಿವ್ಗಳು, ಕೋಚ್ಗಳು, ತಪಾಸಣಾ ಗಾಡಿಗಳು, ಸರಕು ವ್ಯಾಗನ್ಗಳು, ಕ್ರೇನ್,ಆಟಿಕೆ ರೈಲು ಮತ್ತು ಇತರ ಎಲ್ಲ ಹೊರಾಂಗಣ ಪ್ರದರ್ಶನದ ವಸ್ತುಗಳನ್ನು ಪ್ರವಾಸಿಗರಿಗೆ ಅದ್ಭುತ ಅನುಭವ ನೀಡಲು ದೀಪಗಳಿಂದ ಅಲಂಕೃತಗೊಳಿಸಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅ. 12 (ಮಂಗಳವಾರ) ರಂದು ವಾರದ ರಜೆ ಇರುವುದಿಲ್ಲ.
ಪ್ರವಾಸಿಗರು ಯಾವುದೇ ಕೈಚೀಲಗಳು, ಬ್ಯಾಕ್ಪ್ಯಾಕ್ಗಳನ್ನು ವಸ್ತುಸಂಗ್ರಹಾಲಯದ ಆವರಣಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ. ಹೊರಗಿನಿಂದ ತಂದ ಆಹಾರ, ಪಾನೀಯಗಳ ಸೇವನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸ್ವಾಗತ ಕೌಂಟರ್ನಲ್ಲಿ ನಿಗದಿತ ಶುಲ್ಕ ಪಾವತಿಸಿದ ನಂತರ ಎಸ್ಎಲ್ಆರ್, ಡಿಎಸ್ಎಲ್ಆರ್ನೊಂದಿಗೆ ಸ್ಥಿರ ಛಾಯಾಗ್ರಹಣಕ್ಕೆ ಅವಕಾಶ ನೀಡಲಾಗುವುದು.
ಸಂದರ್ಶಕರು ಕೋವಿಡ್ ಸಂಬಂಧಿತ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಮನವಿ ಮಾಡಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment