ಇದನ್ನು ಓದಿ –CET ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಸಿಕ್ಕಿಬಿದ್ದ ವಿದ್ಯಾರ್ಥಿ
ಮೈಸೂರಿನ ರೈಲ್ವೆ ಡಿಆರ್ಎಂ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ ಮೈಸೂರಿನ ನಿಲ್ದಾಣದ ಮೇಲಿರುವ ಒತ್ತಡ ನಿವಾರಿಸಿ, ಮೇಲ್ದರ್ಜೆಗೇರಿಸಲು ವಿಸ್ತರಣೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ರೈಲು ನಿಲ್ದಾಣದ ವಿಸ್ತರಣೆ ಯೋಜನೆಗೂ ಚಾಲನೆ ನೀಡಲಿದ್ದಾರೆ’ ಎಂದರು.
ಯೋಜನೆಯ ರೂಪ ರೇ಼ಷ ಹೇಗೆ ?
1) ಮೈಸೂರು ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ 65 ಎಕರೆ ಜಾಗದಲ್ಲಿರುವ ಕ್ವಾರ್ಟಸ್ಗಳನ್ನು ನೆಲಸಮ ಮಾಡಿ ನಿಲ್ದಾಣದ ವಿಸ್ತರಣೆ ಮಾಡಲಾಗುವುದು.
2) ಹೆಚ್ಚುವರಿಯಾಗಿ 3 ಫ್ಲಾಟ್ಫಾರ್ಮ್ ಲೈನ್, 4 ಪಿಟ್ ಲೈನ್, 4 ಸ್ಥಿರ ಲೈನ್, 1 ಶಂಟಿಂಗ್ ನೆಕ್ ನಿರ್ಮಿಸಲು ಯೋಜಿಸಲಾಗಿದೆ.
3) ವಿಸ್ತೃತ ಯೋಜನಾ ವರದಿ ಸಿದ್ಧಗೊಂಡ ಬಳಿಕ ಕಾಮಗಾರಿ ಆರಂಭವಾಗಲಿದೆ
4) ಮೈಸೂರಿಗೆ ಮೆಮು ರೈಲುಗಳು ಹೆಚ್ಚಾಗಿ ಬರುತ್ತಿವೆ. ಆದ್ದರಿಂದ ನಾಗನಹಳ್ಳಿಯಲ್ಲಿ 92.07 ಕೋಟಿ ರು ವೆಚ್ಚದಲ್ಲಿ ಮೆಮು ಶೆಡ್ ನಿರ್ಮಿಸಲಾಗುವುದು.
5) 1 ಹೆಚ್ಚುವರಿ ಫ್ಲಾಟ್ಫಾರ್ಮ್, 2 ಸ್ಟೇಬ್ಲಿಂಗ್ ಲೈನ್ ನಿರ್ಮಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ಮೈಸೂರಿನಿಂದ ಸಂಪರ್ಕ ಇರುವುದರಿಂದಾಗಿ ಭವಿಷ್ಯದಲ್ಲಿ ನಾಗನಹಳ್ಳಿಯಲ್ಲಿ ಟರ್ಮಿನಲ್ ಅಭಿವೃದ್ಧಿಪಡಿಸಲಾಗುತ್ತದೆ.
6) ಅಶೋಕಪುರಂನಲ್ಲಿ 2 ಫ್ಲಾಟ್ಫಾರ್ಮ್, ಫುಟ್ಓವರ್ ಬ್ರಿಡ್ಜ್ ನಿರ್ಮಿಸಲಾಗುವುದು
7) ಬೆಂಗಳೂರು-ಮೈಸೂರು ದಶಪಥ ರಸ್ತೆ, ನಾಗನಹಳ್ಳಿ ರೈಲ್ವೆ ಟರ್ಮಿನಲ್ ನಿರ್ಮಾಣದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಚುನಾವಣೆ ಪ್ರಚಾರದ ವೇಳೆ ಮಾಡಿದ್ದರು. ಭೂಸ್ವಾಧೀನ ವಿಳಂಬದ ಹಿನ್ನೆಲೆಯಲ್ಲಿ ನಾಗನಹಳ್ಳಿ ಟರ್ಮಿನಲ್ ನಿರ್ಮಾಣ ಸಾಧ್ಯವಾಗಿಲ್ಲ
ಸುದ್ದಿಗೋಷ್ಠಿಯಲ್ಲಿ ಡಿಆರ್ಎಂ ರಾಹುಲ್ ಅಗರ್ವಾಲ್, ಎಸ್ಡಿಆರ್ಎಂ ಮಂಜುನಾಥ್, ರವಿಚಂದ್ರ ಇದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು