Karnataka

ಮೈಸೂರು ರೈಲು ನಿಲ್ದಾಣ ವಿಸ್ತರಣೆ: 395. 73 ಕೋಟಿ ರು ಯೋಜನೆಗೆ ಪ್ರಧಾನಿ ಶಂಕು ಸ್ಥಾಪನೆ

ಮೈಸೂರಿನ ಕೇಂದ್ರ ರೈಲು ನಿಲ್ದಾಣವನ್ನು 395.73 ಕೋಟಿ ರು ವೆಚ್ಚದಲ್ಲಿ ವಿಸ್ತರಣೆ ಮಾಡಲು ಯೋಜಿಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.

ಇದನ್ನು ಓದಿ –CET ಪರೀಕ್ಷೆಯಲ್ಲಿ ಮೊಬೈಲ್​ ಬಳಸಿ ಸಿಕ್ಕಿಬಿದ್ದ ವಿದ್ಯಾರ್ಥಿ

ಮೈಸೂರಿನ ರೈಲ್ವೆ ಡಿಆರ್‌ಎಂ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ ಮೈಸೂರಿನ ನಿಲ್ದಾಣದ ಮೇಲಿರುವ ಒತ್ತಡ ನಿವಾರಿಸಿ, ಮೇಲ್ದರ್ಜೆಗೇರಿಸಲು ವಿಸ್ತರಣೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್‌ 20ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ರೈಲು ನಿಲ್ದಾಣದ ವಿಸ್ತರಣೆ ಯೋಜನೆಗೂ ಚಾಲನೆ ನೀಡಲಿದ್ದಾರೆ’ ಎಂದರು.

ಯೋಜನೆಯ ರೂಪ ರೇ಼ಷ ಹೇಗೆ ?

1) ಮೈಸೂರು ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ 65 ಎಕರೆ ಜಾಗದಲ್ಲಿರುವ ಕ್ವಾರ್ಟಸ್‌ಗಳನ್ನು ನೆಲಸಮ ಮಾಡಿ ನಿಲ್ದಾಣದ ವಿಸ್ತರಣೆ ಮಾಡಲಾಗುವುದು.

2) ಹೆಚ್ಚುವರಿಯಾಗಿ 3 ಫ್ಲಾಟ್‌ಫಾರ್ಮ್ ಲೈನ್, 4 ಪಿಟ್ ಲೈನ್, 4 ಸ್ಥಿರ ಲೈನ್, 1 ಶಂಟಿಂಗ್ ನೆಕ್ ನಿರ್ಮಿಸಲು ಯೋಜಿಸಲಾಗಿದೆ.

3) ವಿಸ್ತೃತ ಯೋಜನಾ ವರದಿ ಸಿದ್ಧಗೊಂಡ ಬಳಿಕ ಕಾಮಗಾರಿ ಆರಂಭವಾಗಲಿದೆ

4) ಮೈಸೂರಿಗೆ ಮೆಮು ರೈಲುಗಳು ಹೆಚ್ಚಾಗಿ ಬರುತ್ತಿವೆ. ಆದ್ದರಿಂದ ನಾಗನಹಳ್ಳಿಯಲ್ಲಿ 92.07 ಕೋಟಿ ರು ವೆಚ್ಚದಲ್ಲಿ ಮೆಮು ಶೆಡ್ ನಿರ್ಮಿಸಲಾಗುವುದು.

5) 1 ಹೆಚ್ಚುವರಿ ಫ್ಲಾಟ್‌ಫಾರ್ಮ್, 2 ಸ್ಟೇಬ್ಲಿಂಗ್ ಲೈನ್ ನಿರ್ಮಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ಮೈಸೂರಿನಿಂದ ಸಂಪರ್ಕ ಇರುವುದರಿಂದಾಗಿ ಭವಿಷ್ಯದಲ್ಲಿ ನಾಗನಹಳ್ಳಿಯಲ್ಲಿ ಟರ್ಮಿನಲ್ ಅಭಿವೃದ್ಧಿಪಡಿಸಲಾಗುತ್ತದೆ.

6) ಅಶೋಕಪುರಂನಲ್ಲಿ 2 ಫ್ಲಾಟ್‌ಫಾರ್ಮ್, ಫುಟ್‌ಓವರ್ ಬ್ರಿಡ್ಜ್ ನಿರ್ಮಿಸಲಾಗುವುದು

7) ಬೆಂಗಳೂರು-ಮೈಸೂರು ದಶಪಥ ರಸ್ತೆ, ನಾಗನಹಳ್ಳಿ ರೈಲ್ವೆ ಟರ್ಮಿನಲ್ ನಿರ್ಮಾಣದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2018ರಲ್ಲಿ ಚುನಾವಣೆ ಪ್ರಚಾರದ ವೇಳೆ ಮಾಡಿದ್ದರು. ಭೂಸ್ವಾಧೀನ ವಿಳಂಬದ ಹಿನ್ನೆಲೆಯಲ್ಲಿ ನಾಗನಹಳ್ಳಿ ಟರ್ಮಿನಲ್ ನಿರ್ಮಾಣ ಸಾಧ್ಯವಾಗಿಲ್ಲ

ಸುದ್ದಿಗೋಷ್ಠಿಯಲ್ಲಿ ಡಿಆರ್‌ಎಂ ರಾಹುಲ್ ಅಗರ್‌ವಾಲ್‌, ಎಸ್‌ಡಿಆರ್‌ಎಂ ಮಂಜುನಾಥ್, ರವಿಚಂದ್ರ ಇದ್ದರು.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024