ಇದನ್ನು ಓದಿ –ಗಂಡ, ಮಾವ, ಅತ್ತೆ ಕಿರುಕುಳವೇ ಸ್ಫೂರ್ತಿ; IAS ಪಾಸ್ ಮಾಡಿದ 7 ವರ್ಷದ ಮಗುವಿನ ತಾಯಿ
ಇಂಡಿಯಾ ಗೇಟ್ ಬಳಿ ಸ್ಥಾಪಿಸಬೇಕೆಂದಿರುವ 30 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಕಡೆಯುವ ಕಾರ್ಯದಲ್ಲಿ ಯೋಗಿರಾಜ್ರನ್ನು ನೇಮಿಸಿಕೊಳ್ಳಲಾಗಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ನ ತಂಡವೊಂದು ನೇತಾಜಿ ಪ್ರತಿಮೆಯ ವಿನ್ಯಾಸ ಮಾಡಿದೆ.
ನೇತಾಜಿಯವರ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಎನ್ಜಿಎಂಎ ಮಹಾನಿರ್ದೇಶಕ ಅದ್ವೈತ ಗದಾನಾಯಕ್ ನೇತೃತ್ವದ ತಂಡದ ಸಹಯೋಗದಲ್ಲಿ ಯೋಗಿರಾಜ್ ಕೆಲಸ ಮಾಡಲಿದ್ದಾರೆ. ಯೋಗಿರಾಜ್ ಅವರು ಶಿಲ್ಪದಲ್ಲಿ ಮುಖಭಾವ ವ್ಯಕ್ತಪಡಿಸುವ ಕಲೆ ಸಿದ್ದಿಸಿಕೊಂಡಿರುವುದರಿಂದ ನೇತಾಜಿ ಪ್ರತಿಮೆಯ ಮುಖಭಾಗದ ಕೆತ್ತನೆ ಕಾರ್ಯದ ಜವಾಬ್ದಾರಿ ಯೋಗಿರಾಜ್ ಅವರಿಗೆ ವಹಿಸಿದೆ.
ನೇತಾಜಿಯ ಬೃಹತ್ ಪ್ರತಿಮೆಯ ನಿರ್ಮಾಣಕ್ಕಾಗಿ ತೆಲಂಗಾಣದ ದೈತ್ಯ ಕಪ್ಪು ಗ್ರಾನೈಟ್ ಶಿಲೆಯೊಂದನ್ನು ತೆಗೆದಿರಿಸಲಾಗಿದ್ದು, ದೆಹಲಿಗೆ ಶೀಘ್ರದಲ್ಲೇ ಸಾಗಿಸಲಾಗುತ್ತಿದೆ. ಆ ಬಳಿಕ ಕೆತ್ತನೆ ಕೆಲಸ ಆರಂಭಿಸುವ ನಿರೀಕ್ಷೆ ಇದೆ. ಅರುಣ್ ಯೋಗಿರಾಜ್ ಇಂದು ದೆಹಲಿಗೆ ತೆರಳಿದ್ದಾರೆ. ಅರುಣ್ ಯೋಗಿರಾಜ್ ಸೇರಿದಂತೆ ಇಡೀ ಎನ್ಜಿಎಂಎ ತಂಡಕ್ಕೆ ಆಗಸ್ಟ್ 15ರೊಳಗೆ ಪ್ರತಿಮೆ ಕೆತ್ತನೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ಅರುಣ್ ಯೋಗಿರಾಜ್ ಸೇರಿದಂತೆ 20ಕ್ಕೂ ಹೆಚ್ಚು ಶಿಲ್ಪಿಗಳು ಈ ಕಾರ್ಯದಲ್ಲಿ ತೊಡಗಿದ್ದಾರೆ.
ಬೋಸ್ ಪ್ರತಿಮೆಗಾಗಿ ಕಪ್ಪು ಗ್ರಾನೈಟ್ ಬಂಡೆಗಳನ್ನು ದೇಶದೆಲ್ಲೆಡೆ ಹುಡುಕಲಾಗಿತ್ತು. ಅಂತಿಮವಾಗಿ ಒಡಿಶಾ ಮತ್ತು ತೆಲಂಗಾಣದಲ್ಲಿ ಸೂಕ್ತವಾದ ಶಿಲೆಗಳು ಸಿಕ್ಕಿವೆ.
ಅರುಣ್ ಅವರ ತಂದೆ ಯೋಗಿರಾಜ್ ಶಿಲ್ಪಿ ಮಹಾನ್ ಶಿಲ್ಪಿ ಎಂದು ಹೆಸರುವಾಸಿಯಾಗಿದ್ದವರು,ಮೈಸೂರು ಅರಮನೆಯಲ್ಲಿ ಪ್ರಮುಖ ಶಿಲ್ಪಿಗಳಾಗಿ ಕೆಲಸ ಮಾಡುತ್ತಿದ್ದವರು. 37ವರ್ಷದ ಅರುಣ್ ಯೋಗಿರಾಜ್ ಎಂಬಿಎ ವ್ಯಾಸಂಗ ಮಾಡಿದ್ದರೂ ತಮ್ಮ ಮನೆತನದ ಅತ್ಯಂತ ವಿರಳ ಕಲಾಸಿದ್ದಿಗೆ ತಮ್ಮನ್ನು ತೊಡಗಿಸಿಕೊಂಡಿದ್ದಾರೆ 2008ರಿಂದ ಪೂರ್ಣಾವಧಿ ಶಿಲ್ಪಿಯಾಗಿ ಕೆಲಸ ಮಾಡುತ್ತಿದ್ದಾರೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment