Main News

ಮಾನವೀಯತೆಗಾಗಿ ಯೋಗ: ಮೈಸೂರು ಆಧ್ಯಾತ್ಮಿಕ ಕೇಂದ್ರ ಪ್ರಧಾನಿ ಮೋದಿ ಬಣ್ಣನೆ

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು, ಯೋಗ ಭೂಮಿ. ಇಲ್ಲಿ ಕಂಡ ಯೋಗದ ಬೆಳಕು ಇವತ್ತು ವಿಶ್ವದ ಎಲ್ಲೆಡೆ ಪಸರಿಸಿದೆ. ಇಂದು ಯೋಗ ವಿಶ್ವಕ್ಕೆ ಆರೋಗ್ಯದ ಮಹತ್ವವನ್ನು ತಿಳಿಸುತ್ತಿದೆ. ಮೈಸೂರು ಭಾರತದ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಮೊದಲು ಯೋಗವನ್ನು ಕೇವಲ ಮನೆಗಳಲ್ಲಿ ಮಾತ್ರ ಮಾಡಲಾಗುತ್ತಿತ್ತು. ಯೋಗ ವ್ಯಕ್ತಿಗೆ ಮಾತ್ರವಲ್ಲ, ವಿಶ್ವ ಮಾನವೀಯತೆ ಬೇಕಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಕೊರೊನಾ ಸಮಯದಲ್ಲೂ ಕೂಡ ಯೋಗ ದಿನದ ಉತ್ಸಾಹ ಕಡಿಮೆ ಆಗಿರಲಿಲ್ಲ. ಇಂದು ಯೋಗ ದಿನಾಚರಣೆ ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ. ನಮ್ಮೆಲರ ಜೀವನಕ್ಕೆ ಯೋಗ ವಿಶ್ವಾಸವನ್ನು ನೀಡುತ್ತಿದೆ ಎಂದರು. ಮೈಸೂರಿನ ಅರಮನೆಯ ಮುಂಭಾಗ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಮಾತನಾಡಿ ಮೈಸೂರು ಯೋಗದ ತವರು ಎಂದು ಬಣ್ಣಿಸಿದರು.

ಮೈಸೂರಿನಂತಹ ಭಾರತದ ಆಧ್ಯಾತ್ಮಿಕ ಕೇಂದ್ರಗಳಿಂದ ಶತಮಾನಗಳಿಂದ ಪೋಷಿಸಿಕೊಂಡು ಬಂದಿರುವ ಯೋಗ ಶಕ್ತಿ ಇಂದು ವಿಶ್ವ ಆರೋಗ್ಯಕ್ಕೆ ದಿಕ್ಸೂಚಿಯಾಗಿದೆ. ಇಂದು ಯೋಗವು ಜಾಗತಿಕ ಸಹಕಾರಕ್ಕೆ ಪರಸ್ಪರ ಆಧಾರವಾಗುತ್ತಿದೆ ಎಂದರು.

ಯೋಗವು ಮನುಕುಲಕ್ಕೆ ಆರೋಗ್ಯಕರ ಜೀವನದ ನಂಬಿಕೆಯನ್ನು ನೀಡುತ್ತಿದೆ. ಯೋಗ ಈಗ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಯೋಗವು ಯಾವುದೇ ವ್ಯಕ್ತಿಗೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ. ಆದ್ದರಿಂದ, ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನದ ಥೀಮ್ – ಮಾನವೀಯತೆಗಾಗಿ ಯೋಗ ಆಗಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಯೋಗದಿಂದ ಶಾಂತಿಯು ಕೇವಲ ವ್ಯಕ್ತಿಗಳಿಗೆ ಮಾತ್ರವಲ್ಲ. ಯೋಗದಿಂದ ನಮ್ಮ ಸಮಾಜಕ್ಕೆ ಶಾಂತಿ ಸಿಗುತ್ತದೆ. ಯೋಗವು ನಮ್ಮ ರಾಷ್ಟ್ರಗಳಿಗೆ ಮತ್ತು ಜಗತ್ತಿಗೆ ಶಾಂತಿಯನ್ನು ತರುತ್ತದೆ. ಮತ್ತು ಯೋಗವು ನಮ್ಮ ವಿಶ್ವಕ್ಕೆ ಶಾಂತಿಯನ್ನು ತರುತ್ತದೆ ಎಂದು ಹೇಳಿದರು.

ಇದನ್ನು ಓದಿ – ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಇಂದಿನ ಜೀವನ ಶೈಲಿ ಭಾರೀ ಬದಲಾವಣೆ ಆಗಿದೆ. ಯೋಗ ನಮ್ಮ ಬದುಕಿಗೂ ಪ್ರೇರಣೆಯಾಗಿದೆ. ದೇಶದ 75 ಐತಿಹಾಸಿಕ ಕೇಂದ್ರ ಸ್ಥಳಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಜೀವನ ಒಂದು ಭಾಗವಲ್ಲ, ಇಂದು ಯೋಗ ಜೀವನ ಶೈಲಿಯೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಾರ್ಡಿಯನ್ ರಿಂಗ್ ಆಫ್ ಯೋಗ ಮಾಡಲಾಗುತ್ತಿದೆ. ಜಗತ್ತಿನ ಹಲವು ದೇಶಗಳಲ್ಲಿ ಸುರ್ಯೋದಯದೊಂದಿಗೆ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕಾಗಿ ಆಯುಷ್ಮಾನ್ ಇಲಾಖೆಯಲ್ಲಿ ಸ್ಟಾರ್ಟ್​​ಅಪ್ ಕೂಡ ತರಲಾಗಿದೆ. ವಿಶ್ವದಲ್ಲಿ ರೋಗ ಮುಕ್ತಿಗೆ ಯೋಗಾಸನವೇ ಆಧಾರವಾಗಿದೆ. ಪ್ರತಿನಿತ್ಯ ಪ್ರಾಣಾಯಾಮ, ಯೋಗ ಮಾಡೋದನ್ನು ರೂಢಿಸಿಕೊಳ್ಳಿ ಎಂದು ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024