ನನಗೆ ಕೆಲವರು ಕೆಲಸ ಮಾಡಲು ಬಿಡಲಿಲ್ಲ. ಅನಗತ್ಯವಾಗಿ ತೊಂದರೆ ಕೊಟ್ಟರು. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ ಎಂದು ಭೂ ಮಾಫಿಯಾ ಕುತಂತ್ರ ಕುರಿತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ವರ್ಗಾವಣೆ ಬೆನ್ನಲ್ಲೇ ಸುದ್ದಿಗಾರರ ಜೊತೆ ಮಾತನಾಡಿದ. ರೋಹಿಣಿ, ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸುತ್ತಿದ್ದೆ ಎಂದರು.
ಕೇರ್ಗಳ್ಳಿ ಕೆರೆಯ ಒತ್ತುವರಿ ತೆರವು ಮಾಡಿ ನೀರು ತುಂಬಿಸಲು ಪ್ರಯತ್ನಿಸಿದ್ದೆ. ಅದರ ಜತೆಗೆ ಸರ್ವೇ ನಂ. 4ರ 1500 ಎಕರೆ ಜಾಗ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ನಲ್ಲೂ ಒಳ್ಳೆಯ ವಕೀಲ ರನ್ನು ಇಟ್ಟು ಹೋರಾಟ ಮಾಡುತ್ತಿದ್ದೇವೆ ಎಂದರು.
ಕೋವಿಡ್ ನಿಯಂತ್ರಣಕ್ಕೂ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ವ್ಯಾಕ್ಸಿನೇಷನ್ನಲ್ಲಿ ಮೈಸೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜುಲೈ ವೇಳೆಗೆ ಮೈಸೂರನ್ನು ಕೊರೊನಾ ಮುಕ್ತ ಅಂತ ಘೋಷಣೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರು ಜನತೆಗೆ ನನ್ನ ಧನ್ಯವಾದಗಳು. ಗಾಂಧೀಜಿ ಹೇಳಿದಂತೆ ನನ್ನ ಕೆಲಸದ ಮೂಲಕವೇ ಉತ್ತರ ಕೊಡ್ತೀನಿ ಎಂದು ಹೇಳಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment