Trending

ಮೈಸೂರು ರೈಲು ವಸ್ತು ಸಂಗ್ರಹಾಲಯ ದಲ್ಲಿ ಆರ್. ಕೆ. ಲಕ್ಷ್ಮಣ್

ಮೈಸೂರು ರೈಲು ವಸ್ತು ಸಂಗ್ರಹಾಲಯವು ಅಚ್ಚರಿಯ ಸಂದರ್ಶಕನನ್ನು ಬರಮಾಡಿಕೊಂಡಿದೆ.

ಚೌಕಳಿಯ ಕೋಟ್ ಮತ್ತು ಗೊಂದಲದ ಮುಖಭಾವ ಹೊಂದಿರುವ ವ್ಯಕ್ತಿಯೊಬ್ಬರು ಈ ದಿನಗಳಲ್ಲಿ ರೈಲು ಸಂಗ್ರಹಾಲಯದಲ್ಲಿದ್ದಾರೆ. ಅವರು ಬೇರೆ ಯಾರೂ ಅಲ್ಲ, ಹೆಚ್ಚು ಇಷ್ಟವಾಗುವ ಮತ್ತು ನಿರಂತರವಾಗಿ ಅನುಸರಿಸಲ್ಪಡುವ, ಪ್ರಸಿದ್ಧ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ರವರು ಸೃಷ್ಟಿಸಿ ಅಜರಾಮರಗೊಳಿಸಿದ ವಿಡಂಬನ ಚಿತ್ರಪಾತ್ರ ‘ಕಾಮನ್ ಮ್ಯಾನ್’ (ಸಾಮಾನ್ಯ ಮನುಷ್ಯ). ಈ ಪಾತ್ರವು ಎಲ್ಲಾ ವಯಸ್ಸಿನ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.

ಮೈಸೂರು ವಿಭಾಗವು ಪ್ರಸಿದ್ಧ ವಿಡಂಬನ ಪಾತ್ರದ ಜೀವನ ಗಾತ್ರ ಶಿಲ್ಪವನ್ನು ರೈಲು ಸಂಗ್ರಹಾಲಯದ ಆವರಣದಲ್ಲಿ ಸ್ಥಾಪಿಸಿದೆ. ಇದು ವಿಭಾಗದ ಮತ್ತೊಂದು ನವೀನ ಉಪಕ್ರಮವಾಗಿದೆ. ಭಾರತದಲ್ಲಿ ರೈಲ್ವೆಯೆಂದರೆ ಸಾಮಾನ್ಯ ಮನುಷ್ಯನ ಆಶಯ ಮತ್ತು ಆಕಾಂಕ್ಷೆಗಳಿಗಾಗಿಯೇ ಇದೆ.

ಈ ಅಪ್ರತಿಮ ಪಾತ್ರವನ್ನು ಸಂಗ್ರಹಾಲಯದಲ್ಲಿ ಸ್ಥಾಪಿಸುವುದು ಸಾಮಾನ್ಯ ಜನರೊಂದಿಗೆ ರೈಲ್ವೆಯ ಸಂಪರ್ಕವನ್ನು ಆಚರಿಸುವ ಒಂದು ಮಾರ್ಗವಾಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀಮತಿ ಅಪರ್ಣ ಗರ್ಗ್ ರವರು ಹೇಳಿದ್ದಾರೆ.

ದಂತಕತೆಯಾದ ಆರ್.ಕೆ. ಲಕ್ಷ್ಮಣ್ ರವರು ಮೈಸೂರಿನಲ್ಲಿ ಜನಿಸಿದರು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ‘ಕಾಮನ್ ಮ್ಯಾನ್’ ಪಾತ್ರವು 1951 ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತು. ಇದು ಸ್ವತಂತ್ರ ಭಾರತದಲ್ಲಿ ರೈಲ್ವೆಯ ಪ್ರಯಾಣದೊಂದಿಗೆ ಹೊಂದಿಕೆಯಾಗುತ್ತದೆ. ನಗರದಿಂದ ಬಂದ ಸೃಷ್ಟಿಕರ್ತನ ಸೃಜನಶೀಲ ಪ್ರತಿಭೆಗೆ ಇದು ಒಂದು ಸಣ್ಣ ಗೌರವ ಹಾಗೂ ರೂಪಾಂತರಗೊಂಡ ರೈಲು ವಸ್ತುಸಂಗ್ರಹಾಲಯಕ್ಕೆ ಮತ್ತೊಂದು ಅನನ್ಯ ಆಕರ್ಷಣೆಯನ್ನು ಸೇರಿಸುತ್ತದೆ.

ಈ ಜೀವನ ಗಾತ್ರದ ಆವೃತ್ತಿಯನ್ನು ಕೆತ್ತಲು ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಎಂಬುವವರು ಶಿಲ್ಪಕಲೆಯ ಸೃಷ್ಟಿ ಕರ್ತರು.

Team Newsnap
Leave a Comment
Share
Published by
Team Newsnap
Tags: #mysuru#rail

Recent Posts

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024