ಇಂದು ಮೈತ್ರಿ ಅಭ್ಯರ್ಥಿ ಘೋಷಣೆ : ಮಂಡ್ಯ‌ದಿಂದ ಹೆಚ್‌ಡಿಕೆ ಸ್ಪರ್ಧೆ ಖಚಿತ ?

Team Newsnap
1 Min Read

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದ್ದು , . ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕೆ ಇಳಿಯಲಿದ್ದಾರೆ.

ಜಿಲ್ಲೆಯ ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರು ಒತ್ತಡ ಏರಿದಾಗಲೇ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧೆ ಮಾಡುವ ಮನಸ್ಸು ಮಾಡಿದ್ದು , ಆದರೆ ರಾಮನಗರ ಜಿಲ್ಲೆಯ ಮುಖಂಡರು‌ ಹಾಗೂ ಕಾರ್ಯಕರ್ತರು ಕುಮಾರಸ್ವಾಮಿ ರಾಮನಗರದಲ್ಲಿಯೇ ಇರಬೇಕು ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದರು.

ನಿನ್ನೆ ಬೆಂಗಳೂರಿನ ತಮ್ಮ ನಿವಾಸಕ್ಕೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಕರೆದು ಕುಮಾರಸ್ವಾಮಿ ಮಾತನಾಡಿ ,ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಅನಿವಾರ್ಯತೆ ಬಗ್ಗೆ ಕಾರ್ಯಕರ್ತರಿಗೆ ಹೆಚ್‌ಡಿಕೆ ತಿಳಿಸಿದ್ದಾರೆ.SSLC : ಪರೀಕ್ಷಾ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯದಿಂದ ಹೆಚ್‌ಡಿಕೆ ಸ್ಪರ್ಧೆ ಖಚಿತ ಆಗಿದ್ದು, ಇಂದು ಅಧಿಕೃತವಾಗಿ ಘೋಷಣೆಯಾಗಲಿದೆ.

Share This Article
Leave a comment