ಮದುವೆ ಆಗುವಂತೆ ಒತ್ತಾಯಿಸಿ ನಾದಿನಿಯನ್ನು ಭಾವನೇ ಅಪಹರಣ ಮಾಡಿರುವ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯಲ್ಲಿ ಜರುಗಿದೆ.ದೇವರಾಜ್ ಎಂಬಾತ ಪತ್ನಿಯ ಸಹೋದರಿಯನ್ನೇ ಕಿಡ್ನ್ಯಾಪ್ ಮಾಡಿದ್ದಾನೆ ಎಂದು ಹೇಳಲಾಗಿದೆ.
ಅಕ್ಕನನ್ನು ಮದುವೆಯಾಗಿದ್ದ ದೇವರಾಜ್ ಬಳಿಕ ತಾನು ತಂಗಿಯನ್ನು ಪ್ರೀತಿಸುತ್ತಿದ್ದೀನಿ ಅಂತ ಆಕೆಯ ಹಿಂದೆ ಬಿದ್ದಿದ್ದನಂತೆ. ಆದರೆ ದೇವರಾಜ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳಂತೆ. ಈ ಹಿನ್ನೆಲೆಯಲ್ಲಿ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ ಎಂದು ಕುಟುಂಬಸ್ಥರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಮಾಡಿದ್ದ ಪೊಲೀಸರು, ಯುವತಿಯನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿ ದೇವರಾಜ್ ಜೊತೆಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಅಡಿ ಆತನ ಸಹಚರರಾದ ನವೀನ್, ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ