ಜ 13 ರಂದು ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲಿನಲ್ಲಿ ತಂದೆ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸಿಂಧೂ ಳನ್ನು ಪೊಲೀಸರು ಬಂಧಿಸಿದ್ದಾರೆ.
ಜ.13 ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಪಿಟ್ಟೆಕೊಪ್ಪಲು ಗ್ರಾಮದ ನಿವಾಸಿಯಾಗಿದ್ದ 45 ವರ್ಷದ ಗಂಗಾಧರ್, ತನ್ನ 6 ವರ್ಷದ ಮಗ ಜಶ್ವಿತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು
ಸಾವಿಗೂ ಮುನ್ನ ವೀಡಿಯೋ ಮಾಡಿರುವ ಗಂಗಾಧರ್ ತನ್ನ ಸಾವಿಗೆ ಪತ್ನಿಯ ಅಕ್ರಮ ಸಂಬಂಧ ಕಾರಣ ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.
ಪತ್ನಿ ಸಿಂಧು ಹಾಗೂ ಎಲ್.ಐ.ಸಿ ಏಜೆಂಟ್ ನಂಜುಂಡೇಗೌಡನ ನಡುವೆ ಅನೈತಿಕ ಸಂಬಂಧ ಇತ್ತು. ಈ ಬಗ್ಗೆ ಕೇಳಿದರೆ ಇಬ್ಬರು ನನಗೆ ಕಿರುಕುಳ ನೀಡುತ್ತಿದ್ದರು ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.
ಜೊತೆಗೆ ನನ್ನ ಪತ್ನಿ ಆತನ ಜೊತೆ ವೀಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದಳು ಎಂದು ಆರೋಪ ಮಾಡಿದ್ದು, ವೀಡಿಯೋ ಮೂಲಕ ಪತ್ನಿ ಸಿಂಧು ಹಾಗೂ ನಂಜುಂಡೇಗೌಡನ ವಿರುದ್ಧ ಆರೋಪಿಸಿ ತನ್ನ ಹಾಗೂ ಮಗನ ಸಾವಿಗೆ ಇಬ್ಬರೇ ಕಾರಣ ಎಂದು ಆರೋಪಿಸಿದ್ದಾನೆ.
ಮೃತ ಗಂಗಾಧರ್ ಅಣ್ಣ ನೀಡಿದ ದೂರಿನ ಹಿನ್ನೆಲೆ ಮೃತನ ಪತ್ನಿ ಸಿಂಧುಳನ್ನು ಪೊಲೀಸರು ಬಂಧಿಸಿದ್ದಾರೆ.
ನಾಗಮಂಗಲದ ಬಿಂಡಿಗನವೀಲೆ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ