Trending

ನಗರಸಭೆ – ಪುರಸಭೆಗಳಿಗೆ ಎರಡು ವರ್ಷಗಳಿಂದಲೂ ಅಧಿಕಾರ ಇಲ್ಲ – ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಏಕಾಂಗಿ ಪ್ರತಿಭಟನೆ ನಡೆಸಿದ ಪುರಸಭಾ ಸದಸ್ಯ

ನ್ಯೂಸ್ ಸ್ನ್ಯಾಪ್
ಮೈಸೂರು
ರಾಜ್ಯದಲ್ಲಿನ ನಗರ ಸಭೆ ಮತ್ತು ಪುರಸಭೆಗಳಿಗೆ ಚುನಾವಣೆಗಳು ನಡೆದು ಬರೋಬರಿ ಎರಡು ವರ್ಷಗಳು ಗತಿಸುತ್ತಿವೆ. ಆಯ್ಕೆಯಾದ ಪುರಪಿತೃಗಳು, ಕೆಲಸವಿಲ್ಲದ ಜನ ಪ್ರತಿನಿಧಿಗಳು ಎಂಬ ಬೋರ್ಡ್ ಹಾಕಿಕೊಂಡು ಕಾಲ ಹರಣ ಮಾಡುವ ಸ್ಥಿತಿ ಬಂದಿದೆ.

ನಗರಸಭೆ ಮತ್ತು ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಯಲ್ಲಿ ಸಾಕಷ್ಟು ಲೋಪವಿದೆ ಎನ್ನುವ ಕಾರಣಕ್ಕಾಗಿ ನ್ಯಾಯಾಲಯದ ತಡೆಯಾಜ್ಞೆ ನೀಡಿದೆ. ಹೀಗಾಗಿ ಮುಖ್ಯಸ್ಥರ
ಆಯ್ಕೆಯೇ ಒಂದು ಗೊಂದಲದ ಗೂಡಾಗಿದೆ. ಇತ್ತ ಸರ್ಕಾರವೂ ಕೂಡ ನಗರಸಭೆ ಮತ್ತು ಪುರಸಭೆಗಳ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯ ಬಗ್ಗೆ ಯಾವುದೇ ಆಸಕ್ತಿ ತೋರದೇ ಇರುವುದು ಆಯ್ಕೆಯಾದ ಜನ ಪ್ರತಿನಿಧಿಗಳಿಗೆ ನುಂಗಲಾರದ ತುತ್ತಾಗಿದೆ. ಸರ್ಕಾರದ ವೈಫಲ್ಯ, ಜನ ಪ್ರತಿನಿಧಿಗಳ ವಿರೋಧಿ ನೀತಿ ಖಂಡಿಸಿ ಜಿಲ್ಲೆಯ ಎಚ್ ಡಿ ಕೋಟೆಯ ಪುರಸಭಾ ಸದಸ್ಯ ಮಿಲ್ ನಾಗರಾಜ ಎಂಬುವವರು ಗುರುವಾರ ಏಕಾಂಗಿಯಾಗಿ
ಪುರಸಭೆಯ ಕಟ್ಟಡ ಏರಿ ಪ್ರತಿಭಟನೆ ಮಾಡಿದರು. ಇದು ಈಗ ರಾಜ್ಯದ ಗಮನ ಸೆಳೆದಿದೆ. ಎರಡು ವರ್ಷದಿಂದ ನಮಗೆ ಯಾವುದೇ ಅಧಿಕಾರ ನೀಡಿಲ್ಲ. ನಾಮಕಾವಸ್ತೆ ಸದಸ್ಯರಾಗಿರುವುದು ಬೇಸರ ತರಿಸಿದೆ.

ಪುರಸಭಾ ಅಧಿಕಾರಿಗಳು ನಮ್ಮ ಮಾತು ಕೇಳುವುದಿಲ್ಲ. ಜನರು ಮಾತ್ರ ವಾರ್ಡಗಳ ಸಮಸ್ಯೆಗಳನ್ನು ಪರಿಹಾರ ಮಾಡದೇ ಹೋದರೆ ವಾಚಾಮಗೋಚರವಾಗಿ ಬೈಯುತ್ತಾರೆ. ನಾವು ಏನು ತಪ್ಪು ಮಾಡಿದ್ದೇವೆ ಎನ್ನುವ ಕಾರಣಕ್ಕಾಗಿ ನಮಗೆ ಅಧಿಕಾರ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಪುರಸಭಾ ಸದಸ್ಯ ಮಿಲ್ ನಾಗರಾಜ್.
ಇದು ಕೇವಲ ಎಚ್ ಡಿ ಕೋಟೆ ಪುರಸಭೆಯ ಜನಪ್ರತಿನಿಧಿಗಳ ಸಮಸ್ಯೆ ಮಾತ್ರ ಅಲ್ಲ. ಇಡೀ ರಾಜ್ಯದಲ್ಲೇ ನಗರಸಭೆ ಮತ್ತು ಪುರಸಭೆಯ ಸದಸ್ಯರುಗಳ ಗೋಳು ಇದೇ ಆಗಿದೆ.ನಾವು ಯಾಕಾದರೂ ಸದಸ್ಯರಾಗಿ ಆಯ್ಕೆಯಾಗಿದ್ದೇವೆ ಎನ್ನುವಷ್ಟು ರೋಸಿ ಹೋಗಿದ್ದಾರೆ ಪುರಪಿತೃಗಳು. ಅಧಿಕಾರ ಇಲ್ಲದೇ ಹೋದರೆ ನಮ್ಮ ಮಾತು ಯಾವ ಅಧಿಕಾರಿಗಳೂ ಕೇಳುವುದಿಲ್ಲ. ಹೀಗಾಗಿ ಮೀಸಲಾತಿ ಸಮಸ್ಯೆ ಇರುವ ಸ್ಥಳೀಯ ಸಂಸ್ಥೆಗಳನ್ನು ಬಿಟ್ಟು ಉಳಿದೆಲ್ಲ ನಗರಸಭೆ ಮತ್ತು ಪುರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆಸಿ ಸುಸೂತ್ರವಾಗಿ
ಆಡಳಿತ ನಡೆಸಲು ಅವಕಾಶ ಮಾಡಿ ಕೊಟ್ಟರೆ ಸರ್ಕಾರದ ಗಂಟೇನು ಹೋಗುತ್ತದೆ. ಈ ಸಂಗತಿಯನ್ನು ಸಕರ್ಾರವೇ ನ್ಯಾಯಾಲಯಕ್ಕೆ ಮನವರಿಕೆ ಮಾಡಿ, ಚುನಾವಣೆ ಮಾಡಲು
ಅವಕಾಶ ನೀಡಿದರೆ ಪುರಪುತೃಗಳು ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎನ್ನುವುದು ಬಹುತೇಕ ಜನ ಪ್ರತಿನಿಧಿಗಳ ಅಭಿಮತ.

Team Newsnap
Leave a Comment

View Comments

Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024