Categories: KarnatakaMain News

ಸುಪ್ರೀಂ ನ್ಯಾಯಾಧೀಶೆಯಾಗಿ ನಾಗರತ್ನ ಅಧಿಕಾರ ಸ್ವೀಕಾರ : ತವರು ಇಂಗಲಗುಪ್ಪೆಯಲ್ಲಿ ಸಂಭ್ರಮ

ಸುಪ್ರೀಂಕೋರ್ಟ್ ನ್ಯಾಯಾಧೀಶೆ ಯಾಗಿ ನ್ಯಾ.ಬಿ.ವಿ.ನಾಗರತ್ನ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮಸ್ಥರಲ್ಲಿ ಸಂತಸ, ಸಂಭ್ರಮ ಮನೆ ಮಾಡಿದೆ.

ತಂದೆ ಕೂಡ ಸಿಜೆ ಆಗಿದ್ದರು….

ನ್ಯಾ.ನಾಗರತ್ನ ತಂದೆ ದಿ.ಇ.ಎಸ್.ವೆಂಕಟರಾಮಯ್ಯ ಕೂಡ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 1979 ರಿಂದ 1989 ರ ವರೆಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದ ಇ.ಎಸ್.ವೆಂಕಟರಾಮಯ್ಯ.. ಜೂನ್ 19, 1989 ರಿಂದ 6 ತಿಂಗಳ ಅವಧಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು..

ಬೆಂಗಳೂರಿನಲ್ಲಿ ವಾಸವಾಗಿದ್ದರೂ ನ್ಯಾ.ನಾಗರತ್ನ ಹುಟ್ಟೂರಿನ ಅಭಿಮಾನ ಬಿಟ್ಟಿಲ್ಲ. ಆಗಾಗ್ಗೆ ಹುಟ್ಟೂರಿಗೆ ಭೇಟಿ ನೀಡುತ್ತಿರುತ್ತಾರೆ.

ನಾಗರತ್ನ ಅವರ ಕಿರು ಪರಿಚಯ :

30 ಅಕ್ಟೋಬರ್ 1962ರಲ್ಲಿ ನಿವೃತ್ತ ನ್ಯಾಯಮೂರ್ತಿ ದಿ.ಇ.ಎಸ್.ವೆಂಕಟರಾಮಯ್ಯ ಅವರ ಏಕೈಕ ಪುತ್ರಿಯಾಗಿ ಜನಿಸಿದ ಅವರು ಬೆಂಗಳೂರಿನ ಸೋಫಿಯಾ ಶಾಲೆಯಲ್ಲಿ‌ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣ ಪೂರೈಸಿ, ಪಿಯುಸಿ, ಪದವಿ ಹಾಗೂ ಕಾನೂನು ಪದವಿಯನ್ನು ದೆಹಲಿಯಲ್ಲಿ ಪೂರೈಸಿದರು.

1987ರಲ್ಲಿ ಕರ್ನಾಟಕದ ಬಾರ್ ಕೌನ್ಸಿಲ್ ಗೆ ಸೇರಿ ವಕೀಲ ವೃತ್ತಿ ಆರಂಭಿಸಿ, 2008ರಲ್ಲಿ ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದಕ್ಕೂ ಮೊದಲು ಬೆಂಗಳೂರಿನ ಸಾಂವಿಧಾನಿಕ ಮತ್ತು ವಾಣಿಜ್ಯ ಕಾನೂನು ಅಧ್ಯಯನ ಮಾಡಿದರು. ಅವರನ್ನು 17 ಫೆಬ್ರವರಿ 2010ರಂದು ಹೈಕೋರ್ಟ್ ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ನ್ಯಾ ನಾಗರತ್ನ ಅವರ ತಂದೆ ಇ.ಎಸ್.ವೆಂಕಟರಾಮಯ್ಯ ಅವರು ದೇಶದ 19ನೇ ಮುಖ್ಯ ನ್ಯಾಯಾಧೀಶರಾಗಿದ್ದರು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024