ಆಗ್ರದ ತಾಜ್ ಮಹಲ್ ಆವರಣದಲ್ಲಿರುವ ಶಾಹಿ ಮಸೀದಿಯಲ್ಲಿ ನಮಾಜ್ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ತಾಜ್ ಮಹಲ್ ಆವರಣದಲ್ಲಿರುವ ಶಹಿ ಮಸೀದಿಯಲ್ಲಿ ಬುಧವಾರ ಸಂಜೆ 5 ಗಂಟೆಗೆ ನಮಾಜ್ ಮಾಡಿ ಬಂಧನಕ್ಕೆ ಒಳಗದ ನಾಲ್ವರಲ್ಲಿ ಮೂವರು ಹೈದರಾಬಾದ್ನವರು. ಒಬ್ಬರು ಅಜಂಗಢದವರು.
ಇದನ್ನು ಓದಿ –ನಾಯಿ ಜೊತೆ ವಾಕಿಂಗ್ ಮಾಡಲು ಕ್ರೀಡಾಂಗಣವನ್ನೇ ಖಾಲಿ ಮಾಡಿಸಿದ ಐಎಎಸ್ ದಂಪತಿ ಎತ್ತಂಗಡಿ!
ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಪ್ರಕಾರ ಶುಕ್ರವಾರ ಹೊರತುಪಡಿಸಿ ಬೇರೆ ಯಾವ ದಿನಗಳಲ್ಲೂ ತಾಜ್ ಮಹಲ್ ಆವರಣದಲ್ಲಿ ನಮಾಜ್ ಮಾಡುವಂತಿಲ್ಲ ಅಂತ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅದು ಕೂಡ ತಾಜ್ಮಹಲ್ ಸುತ್ತಮುತ್ತಲಿನ ತಾಜ್ಗಂಜ್ ಪ್ರದೇಶದವರಿಗೆ ಮಾತ್ರ ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಮಾತ್ರ ನಮಾಜ್ ಮಾಡಲು ಅವಕಾಶವಿದೆ.
ಒಟ್ಟಾರೆ ಜಗತ್ತಿನ ಅದ್ಭುತಗಳಲ್ಲಿ ಒಂದಾಗಿರೋ ತಾಜ್ ಮಹಲ್ ಇತಿಹಾಸದ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ. ಈ ನಡುವೆಯೇ ನಾಲ್ವರು ತಿಳಿದೋ ಅಥವಾ ತಿಳಿಯದೆ ನಮಾಜ್ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ