ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ.
ಈ ವಿಷಯವನ್ನು ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ನನ್ನ ಹೆಸರು ಇಡದಂತೆ ಸರ್ಕಾರವನ್ನು ಕೋರಿದ್ದೆ. ಅದರಂತೆ ಈಗ ಸರ್ಕಾರ ಈಗ ತನ್ನ ನಿಲುವು ಬದಲಿಸಿಕೊಂಡಿದೆ
ರಾಷ್ಟ್ರಕವಿ ಕುವೆಂಪು ಹೆಸರು ಸೂಕ್ತವಾಗಿದೆ. ಫೆ 27 ರಂದು ಪ್ರಧಾನಿ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆಂದು ಹೇಳಿದರು.