Health

‘ ನಮ್ಮ ಕ್ಲಿನಿಕ್ ‘ ಹೊಸ ರೂಪದಲ್ಲಿ : ವೈದ್ಯಕೀಯ ಸೇವೆ ರಾತ್ರಿ 8 ಗಂಟೆವರೆಗೂ ಲಭ್ಯ

ಬೆಂಗಳೂರು : ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಗಳನ್ನು ನಂಬರ್ 1 ಕ್ಲಿನಿಕ್‍ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಭಿನ್ನ ಪ್ರಯೋಗಗಳಿಗೆ ಚಾಲನೆ ನೀಡಿದ್ದಾರೆ.

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನ ನಮ್ಮ ಕ್ಲಿನಿಕ್ ಗಳ ಮುಖಾಂತರ ಒದಗಿಸುವ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಗಳಿಗೆ ಹೊಸ ಕಾಯಕಲ್ಪ ನೀಡಲು ಯೋಜನೆ ರೂಪಿಸಲಾಗಿದೆ.

ಮೊದಲ ಹಂತವಾಗಿ ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್‍ಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ಗಂಟೆಗೆ ತೆರದು ಮಧ್ಯಾಹ್ನ 12.30ಕ್ಕೆ ಮುಚ್ಚಲಾಗುತ್ತೆ. ಬಳಿಕ ಮಧ್ಯಾಹ್ನ 2 ಗಂಟೆಗೆ ತೆರೆದು 4.30ಕ್ಕೆ ಮುಚ್ಚುತಿದ್ದರು.

ಇದೀಗ ನಮ್ಮ ಕ್ಲಿನಿಕ್‍ ಗಲನ್ನು (Namma Clinic) ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದೆ.

ರಾತ್ರಿಯವರೆಗೂ ನಮ್ಮ ಕ್ಲಿನಿಕ್‍ಗಳು ಕಾರ್ಯನಿರ್ವಹಿಸುವಂತೆ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದರು. ಹೊಸ ಸಮಯದ ಪ್ರಕಾರ ಬೆಳಗ್ಗೆ 7 ಗಂಟೆಗೆ ನಮ್ಮ ಕ್ಲಿನಿಕ್‍ಗಳು ತೆರೆಯಲಿದ್ದು, ಬೆಳಗ್ಗೆ ಹೊತ್ತಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಮಾತ್ರ ಇರುತ್ತಾರೆ. ಬಳಿಕ 12 ಗಂಟೆಯಿಂದ 8 ಗಂಟೆವರೆಗೂ ವೈದ್ಯರು ಹಾಗೂ ನರ್ಸ್ ಜನರಿಗೆ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಲಾಗಿದೆ.ಗ್ರೇಡ್ -1 , ಗ್ರೇಡ್ -2 ತಹಶೀಲ್ದಾರ್ ಗಳ ವರ್ಗಾವಣೆ

ರಾಜ್ಯದಲ್ಲಿ ಒಟ್ಟು 415 ನಮ್ಮ ಕ್ಲಿನಿಕ್‍ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಶೇ.25 ರಷ್ಟು ಕ್ಲಿನಿಕ್‍ ಗಳನ್ನು ಪ್ರಾಯೋಗಿಕ ಹಂತದಲ್ಲಿ ಸಮಯ ಬದಲಾವಣೆ ಮಾಡಲಾಗುತ್ತಿದೆ.

ನಮ್ಮ ಕ್ಲಿನಿಕ್ , #nammaclinic #karnatakaGovernment #Health #BREAKINGNEWS #ನಮ್ಮ_ಕ್ಲಿನಿಕ್

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024