ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ , ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ.
ಜುಲೈ 21ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿ, ಈ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿರುವ ನಂದಿನಿ ದರ 5 ರೂ ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದರು. ಅಲ್ಲದೇ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಅಂತಿಮವಾಗಿ ಸಿಎಂ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.
ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು. SSLC’, ‘ITI’ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೌಕರಿ : 1,016 ಹುದ್ದೆಗಳಿಗೆ ಅರ್ಜಿ
ಯಾವುದರ ಬೆಲೆ ಎಷ್ಟು ಹೆಚ್ಚಳ ಮಾಹಿತಿ
- ನಂದಿನಿ( ಟೋನ್ಡ್ ಹಾಲು) ಅರ್ಧ ಲೀಟರ್ಗೆ 23 ಹಾಗೂ ಒಂದು ಲೀಟರ್ಗೆ 43 ರೂ. ಆಗಲಿದೆ.
- ನಂದಿನಿ (ಡಬಲ್ ಟೋನ್ಡ್ ಹಾಲು) ಅರ್ಧ ಲೀಟರ್ಗೆ 22 ಹಾಗೂ ಒಂದು ಲೀಟರ್ಗೆ 41 ರೂಪಾಯಿ ಆಗಲಿದೆ.
- ನಂದಿನಿ ಶುಭಂ ಅರ್ಧ ಲೀಟರ್ಗೆ 26 ಹಾಗೂ ಒಂದು ಲೀಟರ್ಗೆ 48 ರೂ. ಆಗಲಿದೆ.
- ನಂದಿನಿ ಸ್ಪೆಷಲ್ ಅರ್ಧ ಲೀಟರ್ಗೆ 26 ಮತ್ತು ಒಂದು ಲೀಟರ್ಗೆ 48 ರೂ. ಆಗಲಿದೆ.
- ನಂದಿನಿ ( ಸಮೃದ್ಧಿ) ಅರ್ಧ ಲೀಟರ್ಗೆ 27 ಹಾಗೂ ಒಂದು ಲೀಟರ್ಗೆ 51 ರೂಪಾಯಿ ಆಗಲಿದೆ.
- ನಂದಿನಿ ಹಸುವಿನ ಹಾಲು ಅರ್ಧ ಲೀಟರ್ಗೆ 25 ಹಾಗೂ ಒಂದು ಲೀಟರ್ಗೆ 54 ರೂಪಾಯಿ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

#NandiniMilk #Milkprice #Kannadanews #BestKannadanews #Mandya #mysore #bengaluru #Newsnap #karnataka


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ