Main News

ನಾರಾಯಣಗೌಡ ಕಾಂಗ್ರೆಸ್‌ ಸೇರ್ಪಡೆ ವಿರೋಧ : ಹೈ ಕಮಾಂಡ್‌ಗೆ ವರದಿ – ಕೆ. ಬಿ. ಸಿ

ಸಚಿವ ಕೆ. ಸಿ. ನಾರಾಯಣ ಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾದರೆ ಅದರ ಪರಿಣಾಮ ಪಕ್ಷದ ಮೇಲೆ ಯಾವ ರೀತಿಯಲ್ಲಿ ಬೀರುತ್ತದೆ ಎಂಬುದರ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ಎಲ್ಲಾ ಸ್ಥಳೀಯ ನಾಯಕರೂ ಒಮ್ಮತದಿಂದ ಹೈಕಮಾಂಡ್‌ ಗಮನಕ್ಕೆ ತರಲು ತೆರಳುವುದಾಗಿ ಮಾಜಿ ಶಾಸಕ ಕೆ. ಬಿ. ಚಂದ್ರಶೇಖರ್‌ ಹೇಳಿದರು.

ಇದನ್ನು ಓದಿ :ಮಂಡ್ಯದ KRS ಜಲಾಶಯದ ಒಳಹರಿವು ಹೆಚ್ಚಳ

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಪಟ್ಟಣದ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಹೋಬಳಿ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಕಷ್ಟ – ಸುಖಗಳಿಗೆ ಸ್ಥಳೀಯ ನಾಯಕತ್ವ ಸ್ಪಂದಿಸಿ ಕೆಲಸ ಮಾಡುತ್ತಿದೆ. ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆಯನ್ನು ಹರಿಸಿದರೂ ಕೂಡಾ 40 ಸಾವಿರಕ್ಕೂ ಅಧಿಕ ಮತಗಳು ಕಾಂಗ್ರೆಸ್‌ಗೆ ಬಂದಿವೆ. ಇಂತಹ ನಿಷ್ಠಾವಂತ ಮತದಾರರನ್ನು ಹೊಂದಿರುವ ಕಾಂಗ್ರೆಸ್‌ ಶಕ್ತಿಹೀನವಾಗಲು ಸಾಧ್ಯವೇ ಇಲ್ಲ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ತಾಲೂಕಿನಲ್ಲಿಯೂ ಕೂಡಾ ಅಭಿವೃದ್ಧಿಯ ಪರ್ವ ಮಾಡುತ್ತೇವೆಂದು ಘೋಷಿಸಿಕೊಂಡಿದ್ದ ಬಿಜೆಪಿ ಮಾತಿಗೆ ತಪ್ಪಿದೆ. ಆದ್ದರಿಂದ ಈ ಬಾರಿ ಕಾಂಗ್ರೆಸ್‌ ಗೆಲ್ಲುವುದು ಖಚಿತ ಎಂದರು ‘

ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಿಕ್ಕೇರಿ ಸುರೇಶ್‌ ಮಾತನಾಡಿ. ಪಕ್ಷದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದವರಿಗೆ ಮಾತ್ರ ಪಕ್ಷದ ಪ್ರಮುಖ ಹುದ್ದೆಗಳನ್ನು ನೀಡುವ ಕೆಲಸವನ್ನು ಮಾಡೋಣ’ ಎಂದಾಗ ಎಲ್ಲರೂ ಒಮ್ಮತದ ಅನುಮೋದನೆಯನ್ನು ನೀಡಿದರು.

ಮಾಜಿ ಶಾಸಕ ಬಿ. ಪ್ರಕಾಶ್‌ ಮಾತನಾಡಿ, ‘ದಿನೇಶ್‌ ಗೂಳೀಗೌಡರ ಗೆಲುವಿನ ಅನಂತರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಕ್ತಿ ವೃದ್ದಿಸಿದೆ. ಗೂಳೀಗೌಡರ ಗೆಲುವಿಗೆ ಶ್ರಮಿಸಿದಂತೆ ಪಕ್ಷದ ಕಾರ್ಯಕರ್ತರು ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮಧು ಮಾದೇಗೌಡರ ಗೆಲುವಿಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ನಗರ ಬ್ಲಾಕ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್‌, ಪಕ್ಷದ ಮುಖಂಡರಾದ ಎಂ. ಡಿ. ಕೃಷ್ಣಮೂರ್ತಿ, ಕಾರ್ಯದರ್ಶಿ ಚೇತನಾ ಮಹೇಶ್‌, ಮಾದಾಪುರ ರಾಮ ಕೃಷ್ಣೇಗೌಡ, ಬೂಕನಕೆರೆ ವೆಂಕಟೇಶ್‌, ತಾ. ಪಂ. ಮಾಜಿ ಸದಸ್ಯರುಗಳಾದ ಶಾಮಣ್ಣ, ಸಣ್ಣ ನಿಂಗೇಗೌಡ, ಮಾಧವ ಪ್ರಸಾದ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿವಾಕರ್‌, ಶಿವಣ್ಣ, ರಾಜಯ್ಯ, ವೆಂಕಟಪ್ಪ, ಪುರಸಭಾ ಸದಸ್ಯರಾದ ಡಿ. ಪ್ರೇಂ ಕುಮಾರ್‌, ಕೆ. ಬಿ. ಮಹೇಶ್‌, ಸಲ್ಲು ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದು ಅಭಿಪ್ರಾಯ ಮಂಡಿಸಿದರು.

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024