ಉಕ್ರೇನ್ನಲ್ಲಿ ಮೃತಪಟ್ಟಿರುವ ರಾಜ್ಯದ ಚಳಗೇರಿ ವಿದ್ಯಾರ್ಥಿ ನವೀನ್ ಮೃತದೇಹವನ್ನು, ಭಾರತಕ್ಕೆ ಕರೆತರುವ ವಿಚಾರಕ್ಕೆ ವಿದೇಶಾಂಗ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹಾವೇರಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.
ದೆಹಲಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನವೀನ್ ಕುಟುಂಬವನ್ನು ಭೇಟಿ ಮಾಡಿದ್ದೆ. ನವೀನ್ ಮೃತ ದೇಹವನ್ನು ಭಾರತಕ್ಕೆ ತರಲು ಮನವಿ ಮಾಡಿದ್ದಾರೆ.
ಬುಧವಾರ ವಿದೇಶಾಂಗ ಸಚಿವರನ್ನು ಕೂಡ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಉಕ್ರೇನ್ ಮತ್ತು ರಷ್ಯಾ ಎರಡು ಕಡೆಯಿಂದಲೂ ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಮೃತದೇಹವನ್ನು ಹೇಗೆ ತರಬಹುದು ಎಂದು ರಾಯಭಾರಿ ಕಚೇರಿ ಜೊತೆಗೆ ಚರ್ಚೆ ಮಾಡಿದ್ದಾರೆ. ಒಂದೇರಡು ದಿನಗಳಲ್ಲಿ ಮೃತ ದೇಹವನ್ನು ತರುವ ನಿರೀಕ್ಷೆಗಳಿದೆ. ನವೀನ್ಗೆ ಮೆಟಲ್ ಬಡಿದು ಸಾವು ಸಂಭವಿಸಿರುವ ಸಾಧ್ಯತೆ ಇದೆ.
ಬಾಂಬ್ ಬಿದ್ದಿದ್ದರೇ ದೇಹದ ಅವಶೇಷಗಳು ದೊರಕುತ್ತಿರಲಿಲ್ಲ.
ಸ್ಫೋಟದ ತೀವ್ರತೆಯಿಂದ ಯಾವುದಾದರೂ ಮೆಟಲ್ ನಿಂದ ಪೆಟ್ಟು ಬಿದ್ದಿರುವ ಸಾಧ್ಯತೆ ಇದೆ ಎಂದು ಉದಾಸಿ ಹೇಳಿದ್ದಾರೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ : ತಾಂಬೂಲ ಪ್ರಶ್ನೆ ಅಂತ್ಯ
ಮಳಲಿ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ- ತಾಂಬೂಲ ಪ್ರಶ್ನೆ ಆರಂಭ
IPL 2022: ರಾಜಸ್ಥಾನ ರಾಯಲ್ಸ್ ವಿರುದ್ದ ಗುಜರಾತ್ ಟೈಟನ್ಸ್ ಗೆ ಭರ್ಜರಿ ಜಯ – ಫೈನಲ್ಸ್ ಗೆ ಗುಜರಾತ್