ಉಕ್ರೇನ್ನಲ್ಲಿ ಮೃತಪಟ್ಟಿರುವ ರಾಜ್ಯದ ಚಳಗೇರಿ ವಿದ್ಯಾರ್ಥಿ ನವೀನ್ ಮೃತದೇಹವನ್ನು, ಭಾರತಕ್ಕೆ ಕರೆತರುವ ವಿಚಾರಕ್ಕೆ ವಿದೇಶಾಂಗ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹಾವೇರಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.
ದೆಹಲಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನವೀನ್ ಕುಟುಂಬವನ್ನು ಭೇಟಿ ಮಾಡಿದ್ದೆ. ನವೀನ್ ಮೃತ ದೇಹವನ್ನು ಭಾರತಕ್ಕೆ ತರಲು ಮನವಿ ಮಾಡಿದ್ದಾರೆ.
ಬುಧವಾರ ವಿದೇಶಾಂಗ ಸಚಿವರನ್ನು ಕೂಡ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಉಕ್ರೇನ್ ಮತ್ತು ರಷ್ಯಾ ಎರಡು ಕಡೆಯಿಂದಲೂ ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಮೃತದೇಹವನ್ನು ಹೇಗೆ ತರಬಹುದು ಎಂದು ರಾಯಭಾರಿ ಕಚೇರಿ ಜೊತೆಗೆ ಚರ್ಚೆ ಮಾಡಿದ್ದಾರೆ. ಒಂದೇರಡು ದಿನಗಳಲ್ಲಿ ಮೃತ ದೇಹವನ್ನು ತರುವ ನಿರೀಕ್ಷೆಗಳಿದೆ. ನವೀನ್ಗೆ ಮೆಟಲ್ ಬಡಿದು ಸಾವು ಸಂಭವಿಸಿರುವ ಸಾಧ್ಯತೆ ಇದೆ.
ಬಾಂಬ್ ಬಿದ್ದಿದ್ದರೇ ದೇಹದ ಅವಶೇಷಗಳು ದೊರಕುತ್ತಿರಲಿಲ್ಲ.
ಸ್ಫೋಟದ ತೀವ್ರತೆಯಿಂದ ಯಾವುದಾದರೂ ಮೆಟಲ್ ನಿಂದ ಪೆಟ್ಟು ಬಿದ್ದಿರುವ ಸಾಧ್ಯತೆ ಇದೆ ಎಂದು ಉದಾಸಿ ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment