Main News

ನೌಕಾಪಡೆಯ ನೂತನ ನೌಕಸೇನಾಧಿಪತಿಯಾಗಿ ಆರ್. ಹರಿ ಕುಮಾರ್ ಅಧಿಕಾರ ಸ್ವೀಕಾರ

ಭಾರತೀಯ ನೌಕಾಪಡೆಯ ನೂತನ ನೌಕಸೇನಾಧಿಪತಿಯಾಗಿ ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು

ಆರ್ ಹರಿ ಕುಮಾರ್ ಭಾರತೀಯ ನೌಕಾಪಡೆಯ (Indian Navy) ಅಡ್ಮಿರಲ್ ಕರಂಬಿರ್ ಸಿಂಗ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.

ಈ ಮುನ್ನ ಆರ್ ಹರಿ ಕುಮಾರ್ ಪಶ್ಚಿಮ ನೇವಲ್ ಕಮಾಂಡ್ ಕಮಾಂಡಿಂಗ್ ಇನ್ ಚೀಫ್ (ಎಫ್‍ಒಸಿ-ಇನ್-ಸಿ) ಫ್ಲಾಗ್ ಆಫೀಸರ್ ಆಗಿದ್ದರು. ಅಲ್ಲದೇ ಐಎನ್‍ಎಸ್ ವಿಕ್ರಮಾದಿತ್ಯದ ಸಾಗರೋತ್ತರ ಸಮಿತಿಯ ಮುಖ್ಯಸ್ಥರಾಗಿದ್ದರು ಮತ್ತು ಗೋವಾದ ನೌಕಾ ಯುದ್ಧ ಕಾಲೇಜಿನ ಕಮಾಂಡೆಂಟ್ ಆಗಿ ನೇಮಕಗೊಂಡ ಮೊದಲ ಫ್ಲ್ಯಾಗ್ ಆಫೀಸರ್ ಕೂಡ ಆಗಿದ್ದರು.

ಆರ್ ಹರಿ ಕುಮಾರ್ ಅವರು 1962ರ ಏಪ್ರಿಲ್ 12ರಂದು ಜನಿಸಿದರು. 1981ರ ಡಿಸೆಂಬರ್ ನಲ್ಲಿ ಎ-ಸ್ಕ್ವಾಡ್ರನ್, 61 ಕೋರ್ಸ್ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಿಂದ ಪದವಿ ಪಡೆದರು ಮತ್ತು 1983ರ ಜನವರಿ 1ರಂದು ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನೇಮಕಗೊಂಡರು.

ಸುಮಾರು 39 ವರ್ಷಗಳ ವೃತ್ತಿ ಜೀವನದಲ್ಲಿ ಹರಿ ಕುಮಾರ್ ಅವರು ವಿವಿಧ ಕಮಾಂಡರ್, ಸಿಬ್ಬಂದಿ ಮತ್ತು ಬೋಧನಾ ನೇಮಕಾತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹರಿ ಕುಮಾರ್ ಅವರಿಗೆ ಸಮುದ್ರ ಕಮಾಂಡ್‍ನಲ್ಲಿ ಕೋಸ್ಟ್ ಗಾರ್ಡ್ ಶಿಪ್ ಸಿ-01, ಐಎನ್‍ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್‍ಎಸ್ ಕೋರಾ ಮತ್ತು ಗೈಡೆಡ್ ಮಿಸೈಲ್ ಡೆಸ್ಟ್ರಾಯರ್ ಐಎನ್‍ಎಸ್ ರಣವೀರ್ ಸೇರಿವೆ. ವೆಸ್ಟ್ರೆರ್ನ್ ಫ್ಲೀಟ್‍ನ ಫ್ಲೀಟ್ ಆಪರೇಷನ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಯುಎಸ್‍ನ ನೇವಲ್ ವಾರ್ ಕಾಲೇಜು, ಮಧ್ಯಪ್ರದೇಶದ ಆರ್ಮಿ ವಾರ್ ಕಾಲೇಜು ಮತ್ತು ಯುಕೆಯ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್‍ನಲ್ಲಿ ಕೋರ್ಸ್‍ಗಳನ್ನು ಮಾಡಿದ್ದಾರೆ. ಆರ್.ಹರಿ ಕುಮಾರ್ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ವಿಶಿಷ್ಟ ಸೇವಾ ಪದಕವನ್ನು ಲಭಿಸಿದೆ.

Team Newsnap
Leave a Comment

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024