October 16, 2024

Newsnap Kannada

The World at your finger tips!

kumarswamy

ಚನ್ನಪಟ್ಟಣ ಉಪಚುನಾವಣೆ: ‘NDA’ ಅಭ್ಯರ್ಥಿ ನಾನೆಂದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ

Spread the love

ದಾವಣಗೆರೆ: ಚನ್ನಪಟ್ಟಣ ಉಪಚುನಾವಣೆಯ ಸಂಬಂಧ, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅಚ್ಚರಿಯ ಘೋಷಣೆ ಮಾಡಿದ್ದಾರೆ.

ಅವರು, “ಚನ್ನಪಟ್ಟಣ ಕ್ಷೇತ್ರವನ್ನು ನಾನು ಬಿಟ್ಟುಕೊಡುವುದಿಲ್ಲ, ಮತ್ತು ನಾನು ಎನ್.ಡಿ.ಎ ಅಭ್ಯರ್ಥಿ ಆಗಿ ಸ್ಪರ್ಧಿಸುತ್ತೇನೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಮೂಲಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಇರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಈ ಘೋಷಣೆಯ ಬಳಿಕ, ಉಪಚುನಾವಣೆಯು ತೀವ್ರ ಕುತೂಹಲ ಮೂಡಿಸಿದೆ.ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಹ ಬೆಂಬಲ ಸೂಚಿಸಿದ್ದಾರೆ. ಇದರಿಂದ ಬಿಜೆಪಿ ತಾವು ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ.ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರಿಗೆ ಜಾಮೀನು ಮಂಜೂರು

ಮತ್ತೆ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ “ನಾನೇ ಕಾಂಗ್ರೆಸ್‌ನ ಅಭ್ಯರ್ಥಿ” ಎಂದು ಘೋಷಿಸಿದ ಹಿನ್ನೆಲೆ, ಚನ್ನಪಟ್ಟಣ ಉಪಚುನಾವಣೆಯು ಉತ್ಕಟ ಪೈಪೋಟಿಯ ತಾಣವಾಗಿದ್ದು, ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲು ಕೇವಲ ಒಂದು ವಾರ ಬಾಕಿ ಇರುವುದಾಗಿ ಹೇಳಲಾಗುತ್ತಿದೆ.

Copyright © All rights reserved Newsnap | Newsever by AF themes.
error: Content is protected !!