ನಾಳೆಯಿಂದ 10 ದಿನಗಳ ಕಾಲ ಸರ್ಕಾರದ ಆದೇಶದ ಪ್ರಕಾರ ರಾತ್ರಿ ಕರ್ಫ್ಯೂ ಜಾರಿಯಾಗುತ್ತದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5
ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತೆ. ಆದರೆ ಈ ಸಮಯದಲ್ಲಿ ಓಡಾಟ ನಡೆಸಲು ಯಾವುದೇ ಪಾಸ್ ನೀಡೋದಿಲ್ಲ.
ಇಂತಹ ಖಡಕ್ ಸಂದೇಶ ನೀಡಿದವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪಂತ್ ನೈಟ್ ಕರ್ಪ್ಯೂ ಸರ್ಕಾರದ ಆದೇಶದ ಪ್ರಕಾರ ಇರುತ್ತೆ. ಯಾರು ಹೊರಗಡೆ ಓಡಾಡೋಕೆ ಬಿಡಲ್ಲ. ಆದರೆ ಸರ್ಕಾರ ಆದೇಶದಲ್ಲಿ ವಿನಾಯಿತಿ ನೀಡಿರುವವರಿಗೆ ಓಡಾಟ ಮಾಡಲು ಅವಕಾಶವಿರುತ್ತೆ ಎಂದರು
ಬಸ್, ಕ್ಯಾಬ್ ಸೇವೆಯೂ ಇರುತ್ತೆ. ಆದರೆ ಎಲ್ಲಾ ಭಾಗದಲ್ಲೂ ನಾಕಾಬಂದಿ ಮಾಡಿ ಬಂದ್ ಮಾಡ್ತೀವಿ. ನಮ್ಮ ಪ್ಯಾಟ್ರೋಲಿಂಗ್ ಇರುತ್ತೆ. ನಿಯಮಗಳನ್ನು ಉಲ್ಲಂಘನೆ ಮಾಡುವವ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ (ಎನ್ಡಿಎಂಎ) ಕೇಸ್ ಮಾಡಲಾಗುವುದು ಎಂದು ಹೇಳಿದರು.
ಅಸ್ಪತ್ರೆ ಹೋಗುವವರು ದಾಖಲೆ ತೋರಿಸಿ ಹೋಗಬಹುದು. ಟಿಕೆಟ್ ತೋರಿಸಿ ಪ್ರಯಾಣಿಕರು ಟ್ರಾವೆಲ್ ಮಾಡಬಹುದು. ಯಾವುದೇ ಪಾಸ್ ಕೊಡಲ್ಲ ಎಂದು ಮಾಹಿತಿ ನೀಡಿದರು.
ಉಳಿದಂತೆ ಹೊಸ ವರ್ಷದ ದಿನವೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ತೀವಿ. ಇಂದಿರಾನಗರ, ಕೋರಮಂಗಲ, ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಜನ ಓಡಾಡೋಕೆ ಬಿಡಲ್ಲ. ಅಂದು ಪಬ್, ಬಾರ್ ರೆಸ್ಟೋರೆಂಟ್ ಹತ್ತು ಗಂಟೆಗೆ ಕ್ಲೋಸ್ ಮಾಡಬೇಕು. ಎಮರ್ಜೆನ್ಸಿ ಕೆಲಸ ಇರುವವರು ಬಿಟ್ಟರೇ ಬೇರೆ ಯಾರು ಹೊರ ಬರೋದಕ್ಕೆ ಬಿಡಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ