Bengaluru

ನಾಳೆಯಿಂದ ನೈಟ್​​ ಕರ್ಫ್ಯೂ: ಪಾಸ್ ಕೊಡಲ್ಲ, ನಿಯಮ ಉಲ್ಲಂಘಿಸಿದ್ರೆ NDMA ಕೇಸ್ -ಪಂತ್​ ಎಚ್ಚರಿಕೆ

ನಾಳೆಯಿಂದ 10 ದಿನಗಳ ಕಾಲ ಸರ್ಕಾರದ ಆದೇಶದ ಪ್ರಕಾರ ರಾತ್ರಿ ಕರ್ಫ್ಯೂ ಜಾರಿಯಾಗುತ್ತದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5
ಗಂಟೆಯವರೆಗೆ ನೈಟ್​ ಕರ್ಫ್ಯೂ ಇರುತ್ತೆ‌. ಆದರೆ ಈ ಸಮಯದಲ್ಲಿ ಓಡಾಟ ನಡೆಸಲು ಯಾವುದೇ ಪಾಸ್ ನೀಡೋದಿಲ್ಲ.

ಇಂತಹ ಖಡಕ್ ಸಂದೇಶ ನೀಡಿದವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪಂತ್ ನೈಟ್ ಕರ್ಪ್ಯೂ ಸರ್ಕಾರದ ಆದೇಶದ ಪ್ರಕಾರ ಇರುತ್ತೆ. ಯಾರು ಹೊರಗಡೆ ಓಡಾಡೋಕೆ ಬಿಡಲ್ಲ. ಆದರೆ ಸರ್ಕಾರ ಆದೇಶದಲ್ಲಿ ವಿನಾಯಿತಿ ನೀಡಿರುವವರಿಗೆ ಓಡಾಟ ಮಾಡಲು ಅವಕಾಶವಿರುತ್ತೆ ಎಂದರು

ಬಸ್, ಕ್ಯಾಬ್ ಸೇವೆಯೂ ಇರುತ್ತೆ. ಆದರೆ ಎಲ್ಲಾ ಭಾಗದಲ್ಲೂ ನಾಕಾಬಂದಿ ಮಾಡಿ ಬಂದ್ ಮಾಡ್ತೀವಿ. ನಮ್ಮ ಪ್ಯಾಟ್ರೋಲಿಂಗ್ ಇರುತ್ತೆ. ನಿಯಮಗಳನ್ನು ಉಲ್ಲಂಘನೆ ಮಾಡುವವ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ (ಎನ್‌ಡಿಎಂಎ) ಕೇಸ್ ಮಾಡಲಾಗುವುದು ಎಂದು ಹೇಳಿದರು.

ಅಸ್ಪತ್ರೆ ಹೋಗುವವರು ದಾಖಲೆ ತೋರಿಸಿ ಹೋಗಬಹುದು. ಟಿಕೆಟ್ ತೋರಿಸಿ ಪ್ರಯಾಣಿಕರು ಟ್ರಾವೆಲ್ ಮಾಡಬಹುದು. ಯಾವುದೇ ಪಾಸ್ ಕೊಡಲ್ಲ ಎಂದು ಮಾಹಿತಿ ನೀಡಿದರು.

ಉಳಿದಂತೆ ಹೊಸ ವರ್ಷದ ದಿನವೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ತೀವಿ. ಇಂದಿರಾನಗರ, ಕೋರಮಂಗಲ, ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಜನ ಓಡಾಡೋಕೆ ಬಿಡಲ್ಲ. ಅಂದು ಪಬ್, ಬಾರ್ ರೆಸ್ಟೋರೆಂಟ್ ಹತ್ತು ಗಂಟೆಗೆ ಕ್ಲೋಸ್ ಮಾಡಬೇಕು. ಎಮರ್ಜೆನ್ಸಿ ಕೆಲಸ ಇರುವವರು ಬಿಟ್ಟರೇ ಬೇರೆ ಯಾರು ಹೊರ ಬರೋದಕ್ಕೆ ಬಿಡಲ್ಲ‌.

Team Newsnap
Leave a Comment
Share
Published by
Team Newsnap

Recent Posts

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ

ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉದಯನಿಧಿ ಸ್ಟಾಲಿನ್ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ,ಉದಯನಿಧಿ ಸ್ಟಾಲಿನ್ ಅವರನ್ನ… Read More

September 29, 2024

ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ… Read More

September 28, 2024

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ

ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More

September 28, 2024

ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More

September 28, 2024

MLA ಮುನಿರತ್ನ ಮನೆ ಮೇಲೆ SIT ದಾಳಿ

ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More

September 28, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More

September 27, 2024