ಪ್ರವಾಹದಿಂದ ತತ್ತರಗೊಂಡಿರುವ ಉತ್ತರ ಕರ್ನಾಟಕದ ಜಿಲ್ಲೆಗಳಾದ ಕೊಪ್ಪಳ, ವಿಜಾಪುರ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮನಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಆಯಾ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ಎಲ್ಲ ಜಿಲ್ಲೆಗಳಿಗಿಂತಲೂ ಕಲಬುರ್ಗಿ ಜಿಲ್ಲೆಯಲ್ಲಿ ಅತೀ ಹೆಚ್ಚು ಹಾನಿಯಾಗಿದೆ. ಕಲಬುರ್ಗಿ ಜಿಲ್ಲೆಯ 155 ಗ್ರಾಮಗಳು ಜಲಾವೃತವಾಗಿವೆ. 55 ಗ್ರಾಮಗಳ ಜನರನ್ನು ಸೇರಿ, ಒಟ್ಟು 23,250 ಜನಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿನ 27 ಹಳ್ಳಿಗಳಗಳಲ್ಲಿ ಹಾನಿಯಾಗಿದೆ. 1,861 ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸುವ ಹಾನಿಯುಂಟಾಗಿಲ್ಲ.
ಕಾಳಜಿ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಹಾಗೂ ಉತ್ತಮಆಹಾರ ಪೂರೈಸಲು ಸೂಚಿಸಲಾಗಿದೆ. ಒಂದು ವೇಳೆ ಕಾಳಜಿಕೇಂದ್ರದ ಹತ್ತಿರ ಶುದ್ಧ ಕುಡಿಯುವ ನೀರು ದೊರಕದಿದ್ದರೆ, ಸಿಗುವ ನೀರನ್ನು ಕಾಯಿಸಿ, ಶೋಧಿಸಿ ಸಂತ್ರಸ್ತರಿಗೆ ನೀಡಲು ಆರೋಗ್ಯಾಧಿಕಾರಿಗಳು ಸುಹಚನೆ ನೀಡಿದ್ದಾರೆ. ಡಲ್ಲ ಕಾಳಜಿ ಕೇಂದ್ರಗಳ ಬಳಿ ದಿನವೂ ರೋಗ ನಾಶಕಗಳನ್ನು ಸಿಂಪಡಣೆ ಮಾಡಬೇಕು ಎಂದು ಹೇಳಿದ್ದಾರೆ.
ಕಳೆದ ಬಾರಿ ಇದ್ದಂತಹ ಪರಿಸ್ಥಿತಿ ಈ ಬಾರಿ ಇಲ್ಲ. ಡೆಂಗ್ಯೂ, ಚಿಕನ್ಗುನ್ಯ ರೋಗಗಳ ಹರಡುವಿಕೆ ಪ್ರಮಾಣ ಕಡಿಮೆ ಪ್ರಮಾಣದಲ್ಲಿದೆ. ಚಳಿಗಾಲದ ಜೊತೆ, ಹಬ್ಬದ ಪರ್ವವೂ ಇದಾಗಿರುವದರಿಂದ ಹೆಚ್ಚಿನ ಜಾಗೃತೆಯೊಂದಿಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.
ಕಾಳಜಿ ಕೇಂದ್ರಗಳಲ್ಲಿ ಹಿರಿಯ ನಾಗರೀಕರು, ಬಾಣಂತಿಯರು, ಗರ್ಭಿಣಿಯರು, ಇರುವದರಿಂದ ಅವರ ಆರೋಗ್ಯವನ್ನು ವಿಶೇಷ ಕಾಳಜಿಯಿಂದ ನೋಡಿಕೊಳ್ಳಬೇಕು ಅಥವಾ ಸಮೀಪದ ಆರೋಗ್ಯ ಕೇಂದ್ರಗಳಿಗೆ ಸೇರಿಸಬೇಕು ಎಂಬ ಸೂಚನೆಯನ್ನೂ ನೀಡಲಾಗಿದೆ. ಕಾಳಜಿ ಕೇಂದ್ರದಲ್ಲಿರುವ ಎಲ್ಲರಿಗೂ ಕೋವಿಡ್ನ ಬಗ್ಗೆ ತಜ್ಞರಿಂದ ಅರಿವು ಮೂಡಿಸುವಂತೆ ಹೇಳಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment