ನ್ಯೂಸ್ ಸ್ನ್ಯಾಪ್
ನವದೆಹಲಿ
ರಾಷ್ಟ್ರೀಯ ನೀತಿ ಕುರಿತ ದೇಶದ ಎಲ್ಲಾ ರಾಜ್ಯಪಾಲರ ಮಹತ್ವದ ಸಭೆಯೊಂದು ನಾಳೆ ನವದೆಹಲಿಯಲ್ಲಿ ನಡೆಯಲಿದೆ. ವಿಡಿಯೋ ಲಿಂಕ್ ಮೂಲಕ ದೇಶದ ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನ ಮಂತ್ರಿ ಮೋದಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯ ಆಯೋಜಿಸಿರುವ ಈ ಸಮಾವೇಶದಲ್ಲಿ ಉನ್ನತ ಶಿಕ್ಷಣದ ಪರಿವರ್ತನೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಈಪಿ) ಪಾತ್ರ 2020 ಕುರಿತು ಚರ್ಚೆಗಳು ನಡೆಯಲಿವೆ. ರಾಜ್ಯಪಾಲರೊಂದಿಗೆ ಎಲ್ಲಾ ರಾಜ್ಯದ ಶಿಕ್ಷಣ ಸಚಿವರು, ವಿವಿಗಳ ಉಪ ಕುಲಪತಿಗಳು ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ನೀತಿ ಜಾರಿಗೊಳಿಸಿದ ನಂತರ ಮೊದಲ ಸಭೆ ಇದಾಗಿದೆ. 34 ವರ್ಷಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿಗೆ ಹೊಸ ರೂಪ ನೀಡಲಾಗಿದೆ.ಶಾಲೆ ಮತ್ತು ಉನ್ನತ ಶಿಕ್ಷಣ ಎರಡರಲ್ಲೂ ಈ ನೀತಿ ಮಹತ್ವದ ಬದಲಾವಣೆ ತರಲಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ