Karnataka

ರಾಜ್ಯದಲ್ಲಿ ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ಮಾತ್ರ NEP ಜಾರಿ: ಸಚಿವ ಬಿ.ಸಿ.ನಾಗೇಶ್

ಮುಂದಿನ ವರ್ಷ ರಾಜ್ಯದ ಕೆಲವು ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಮಹಾಂತೇಶ್ ಕೌಜಲಗಿ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಶ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣ ಜಾರಿಗೊಳಿಸಲಾಗುವುದು.
ಪ್ರಾಥಮಿಕ ಹಂತದ ಶಿಕ್ಷಣ ಮಾತ್ರ ಆರಂಭಿಸುತ್ತೇವೆ ಎಂದರು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಹಂತದಲ್ಲಿ ವಿವಿಧ ವಿಷಯಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಎನ್ ಇ ಪಿ ನೀತಿ ಏಕಾಏಕಿ ಜಾರಿಯಾದರೆ ಸಮಸ್ಯೆಯಾಗುತ್ತದೆ ಎಂದು ಕೌಜಲಗಿ ಮತ್ತೆ ಹೇಳಿ ಪೂರ್ವತಯಾರಿಯಿಲ್ಲದೆ ಆರಂಭ ಮಾಡುವುದು ಬೇಡ ಎಂದರು.

ಸಚಿವರು ಉತ್ತರಿಸಿ ಟಾಟಾ ಸಂಸ್ಥೆ ಮೂಲಕ ಈಗಾಗಲೇ ತರಬೇತಿ ಆರಂಭವಾಗಿದೆ. ತರಬೇತಿ ನೀಡದೇ NEP ಜಾರಿ ಮಾಡಲ್ಲ ಎಂದು ಭರವಸೆ ನೀಡಿದರು.

2030ರೊಳಗೆ NEP ಸಂಪೂರ್ಣವಾಗಿ ಜಾರಿಗೊಳಿಸಲು ಹೇಳಿದ್ದಾರೆ. ವಿವಿಧ ಕ್ಷೇತ್ರಗಳ ಪಾಲುದಾರರಿಗೆ NEP ಪರಿಚಯಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಕುರಿತು ರಾಜ್ಯದ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಪೊಸಿಷನ್ ಪೇಪರ್ ಸಿದ್ಧಪಡಿಸಲು ವಿವಿಧ ಸಮಿತಿ ರಚಿಸಲಾಗಿದೆ. ಇದು ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು ಎಂದು ಸಚಿವರು ಉತ್ತರಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024