ಮೈಸೂರಿನ ಛಾಯಾಗ್ರಾಹಕ ನೇತ್ರರಾಜು (62) ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾದರು
ಆಂದೋಲನ, ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಇವರು ಕೆಲಸ ಮಾಡಿದ್ದರು.
ಇವರ ಛಾಯಾಚಿತ್ರಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದ್ದವು.
2014ರಲ್ಲಿ ಇವರು ಕರ್ನಾಟಕದ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು.
ನೇತ್ರರಾಜು ನಿಧನಕ್ಕೆ ಮೈಸೂರು ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.