ಸಿಎಂ ಉದ್ಧವ್ ಠಾಕ್ರೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯರಿ ಸ್ವೀಕರಿಸಿದ ಬೆನ್ನಲ್ಲೇ ಬಿಜೆಪಿಯಿಂದ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿಲು ಸಿದ್ಧತೆ ನಡೆಸುತ್ತಿದ್ದಾರೆ.
ಫಡ್ನವಿಸ್ ಜೊತೆ ಉಪಮುಖ್ಯಮಂತ್ರಿಯೂ ಕೂಡ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂದೆ ಬಣ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಇನ್ನು ಏಕನಾಥ್ ಶಿಂಧೆಗೆ ಸರ್ಕಾರದಲ್ಲಿ ಉತ್ತಮ ಸ್ಥಾನ ನೀಡುವ ಭರವಸೆಯನ್ನು ಬಿಜೆಪಿ ನೀಡಿದೆ.
ಎಸಿಬಿಯೇ ಭ್ರಷ್ಟಾಚಾರದ ಕೂಪ- ರಾಜ್ಯ ಹೈಕೋರ್ಟ್ ಕಿಡಿ
ಶಿವಸೇನೆಯಿಂದ ಬಂಡಾಯವೆದ್ದಿರುವ ಶಾಸಕರಲ್ಲಿ 12 ನಾಯಕರು ಫಡ್ನವಿಸ್ ಸಂಪುಟ ಸೇರಲಿದ್ದಾರೆ. ಹಾಗೆಯೇ ಪಕ್ಷೇತರ ಅಭ್ಯರ್ಥಿಗಳು ಕೂಡ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಮೂವರು ಪಕ್ಷೇತರ ಅಭ್ಯರ್ಥಿಗಳಿಗೆ ಸಚಿವ ಸ್ಥಾನವನ್ನು ಫಡ್ನವಿಸ್ ಟೀಂ ನೀಡಲಿದೆ ಎನ್ನುವ ಮಾಹಿತಿ ಸಿಕ್ಕಿದೆ.